ಲಂಚ ಪಡೆಯುವಾಗ ಸಿಕ್ಕಿಬಿದ್ದ ಚಿತ್ರದುರ್ಗ ತಾಲ್ಲೂಕು ಪಂಚಾಯತ್ ಇಒ: ಆರು ಲಕ್ಷ ರೂ. ನಗದು ಪತ್ತೆ
ಚಿತ್ರದುರ್ಗ: ಬೆಳಗೆರೆ ಗ್ರಾಮ ಪಂಚಾಯಿತಿಯ 14ನೇ ಹಣಕಾಸಿನ ಉಳಿಕೆ ಹಣದಲ್ಲಿ ರೂಪಿಸಿದ ಕ್ರಿಯಾ ಯೋಜನೆಗೆ ಅನುಮೋದನೆ ನೀಡಲು ಪಿಡಿಒ ಬಳಿ 20 ಸಾವಿರ ಲಂಚ ಪಡೆಯುತ್ತಿದ್ದ ಚಳ್ಳಕೆರೆ ತಾಲ್ಲೂಕು ಪಂಚಾಯಿತಿ ಇ.ಓ .ಶ್ರೀಧರ್ ಐ ಬಾರ್ ಕೇರ್ ಎಂಬುವರು ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಬಲೆಗೆ ಬಿದ್ದಿದ್ದಾರೆ.
ಶ್ರೀಧರ್ ಅವರ ಮನೆ, ಕಚೇರಿ ಸೇರಿ ಹಲವೆಡೆ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳಿಗೆ ಆಸ್ತಿ ಪತ್ರಗಳು, ಬ್ಯಾಂಕ್ ಖಾತೆ ಹಾಗೂ 6 ಲಕ್ಷ ರು.ನಗದು ಪತ್ತೆಯಾಗಿದೆ. ನಗದು ಹಣದ ಬಗ್ಗೆ ಸೂಕ್ತ ಮಾಹಿತಿ ನೀಡದ ಕಾರಣ ಶ್ರೀಧರ್ ಅವರನ್ನು ಎಸಿಬಿ ಬಂಧಿಸಿದೆ.
ಚಳ್ಳಕೆರೆ ತಾಲ್ಲೂಕಿನ ಬೆಳಗೆರೆ ಗ್ರಾಮ ಪಂಚಾಯಿತಿಯಲ್ಲಿ 14ನೇ ಹಣಕಾಸಿನಲ್ಲಿ ₹ 7.71 ಲಕ್ಷ ಅನುದಾನ ಉಳಿದಿತ್ತು. ಉಳಿಕೆ ಹಣದಲ್ಲಿ ಹತ್ತು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಕ್ರಿಯೆಯೋಜನೆ ಸಿದ್ಧಪಡಿಸಿ ಜಿಲ್ಲಾ ಪಂಚಾಯಿತಿಗೆ ಸಲ್ಲಿಸಲಾಗಿತ್ತು.