ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ, ನಾಳೆ ಘಟನಾ ಸ್ಥಳಕ್ಕೆ ಭೇಟಿ ನೀಡುವಂತೆ ಸೂಚಿಸಿದ್ದಾರೆ. ಅಂತ್ಯಸಂಸ್ಕಾರಕ್ಕೆ ಎಲ್ಲ ವ್ಯವಸ್ಥೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ. ಪರಿಹಾರದ ಹಣವನ್ನು ತಕ್ಷಣ ತಲುಪಿಸಲಾಗುವುದು, ಸರ್ಕಾರ ನಿಮ್ಮ ಜೊತೆಗಿದೆ. ಯಾವುದೇ ಕಾರಣಕ್ಕೂ ದೃತಿಗೆಡದಂತೆ ಧೈರ್ಯ ತುಂಬಿದ್ದಾರೆ.