Log In
BREAKING NEWS >
"ಕರಾವಳಿಕಿರಣ ಡಾಟ್ ಕಾ೦"ನ ಎಲ್ಲಾ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ "ಶ್ರೀಅನ೦ತವೃತ"ದ ಶುಭಾಶಯಗಳು...

ಸ್ಯಾಂಡಲ್ ವುಡ್ ಹಿರಿಯ ನಿರ್ದೇಶಕ ಕೆ ವಿ ರಾಜು ನಿಧನ

ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಕೆ.ವಿ.ರಾಜು ಅವರು ಶುಕ್ರವಾರ ನಿಧನರಾಗಿದ್ದಾರೆ.

ಅನಾರೋಗ್ಯದ ಕಾರಣ ಬೆಂಗಳೂರಿನ ರಾಜಾಜಿನಗರದ ತಮ್ಮ ನಿವಾಸದಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದ ಕೆವಿ ರಾಜು ಅವರು ಇಂದು ಬೆಳಗ್ಗೆ 8 ಗಂಟೆಯ ಸುಮಾರಿಗೆ ವಿಧಿವಶರಾಗಿದ್ದಾರೆ.

ರಾಜಾಜಿನಗರದ ನಿವಾಸದಲ್ಲಿ ಕೆವಿ ರಾಜು ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು. ಹರಿಶ್ಚಂದ್ರ ಘಾಟ್ ನಲ್ಲಿ ಅಂತ್ಯ ಸಂಸ್ಕಾರ ಮಾಡಲಾಗುತ್ತದೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.

ಕೆವಿ ರಾಜು ಅವರು ಹುಲಿಯಾ, ಬೆಳ್ಳಿ ಮೋಡ, ಇಂದ್ರಜಿತ್, ಬೆಳ್ಳಿ ಕಾಲುಂಗುರ, ಯುದ್ಧಕಾಂಡ ಸೇರಿ ಹಲವು ಚಿತ್ರಗಳನ್ನು ನಿರ್ದೇಶಿಸಿದ್ದರು. ಅಲ್ಲದೆ ಬಾಲಿವುಡ್ ನಲ್ಲಿ ಅಮಿತಾಬ್ ಬಚ್ಚನ್ ಅಭಿನಯದ ಚಿತ್ರವನ್ನೂ ಅವರು ನಿರ್ದೇಶಿಸಿದ್ದರು.

No Comments

Leave A Comment