Log In
BREAKING NEWS >
"ಕರಾವಳಿಕಿರಣ ಡಾಟ್ ಕಾ೦"ನ ಎಲ್ಲಾ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ "ಶ್ರೀಅನ೦ತವೃತ"ದ ಶುಭಾಶಯಗಳು...

ಮರ ಸಾಗಾಟದ ಲಾರಿ ಪಲ್ಟಿ : ನಾಲ್ಕು ಮಂದಿ ದುರ್ಮರಣ

ಸುಳ್ಯ: ಸುಳ್ಯ-ಪಾಣತ್ತೂರು ಅಂತರಾಜ್ಯ ರಸ್ತೆಯ ಪರಿಯಾರಂ ಎಂಬಲ್ಲಿ ಮರ ಸಾಗಾಟದ ಲಾರಿಯೊಂದು ಪಲ್ಟಿಯಾಗಿ ನಾಲ್ಕು ಮಂದಿ ಮೃತಪಟ್ಟಿದ್ದಾರೆ.

ಮರಗಳನ್ನು ತುಂಬಿಸಿ ಸಾಗುತ್ತಿದ್ದ ಲಾರಿಯೊಂದು ಕಲ್ಲಪಳ್ಳಿಯಿಂದ ಪಾಣತ್ತೂರು ಕಡೆಗೆ ತೆರಳುತ್ತಿತ್ತು. ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಸ್ವಲ್ಪ ಸಮಯದ ಹಿಂದೆ ಅದೇ ಸ್ಥಳದಲ್ಲಿ ಬಸ್ಸೊಂದು ಪಲ್ಟಿಯಾಗಿ ಏಳು ಮಂದಿ ಮೃತಪಟ್ಟಿದ್ದರು. ಈ ಘಟನೆ ಮಾಸುವ ಮುನ್ನವೇ ಅಂತಹುದೇ ಮತ್ತೊಂದು ದುರ್ಘಟನೆ ಸಂಭವಿಸಿದೆ.

ದುರ್ಘಟನೆಯಲ್ಲಿ ಲಾರಿಯಲ್ಲಿದ್ದ 4 ಮಂದಿ ಮೃತಪಟ್ಟಿದ್ದು ಮೃತಪಟ್ಟವರನ್ನು ಪಾಣತ್ತೂರು ಸಮೀಪದ ಕುಂಡುಪಳ್ಳಿಯವರು ಎಂದು ಗುರುತಿಸಲಾಗಿದೆ.

ಲಾರಿಯಲ್ಲಿದ್ದವರ ಪೈಕಿ 5 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ.

No Comments

Leave A Comment