ಮಂಗಳೂರು: ಮರಕಡ ಗುರು ಪರಾಶಕ್ತಿ ಮಠದ ಶ್ರೀ ನರೇಂದ್ರನಾಥ ಸ್ವಾಮೀಜಿ ನಿಧನ ಮಂಗಳೂರು:ಮರಕಡ ಗುರು ಪರಾಶಕ್ತಿ ಮಠದ ಶ್ರೀ ನರೇಂದ್ರನಾಥ ಸ್ವಾಮೀಜಿ ಅವರು ಗುರುವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. ಶ್ರೀ ನರೇಂದ್ರನಾಥ ಸ್ವಾಮೀಜಿಯವರು ಮರಕಡದಲ್ಲಿ ಬೃಹತ್ ಆದಿಶಕ್ತಿ ದೇವಾಲಯವನ್ನು ನಿರ್ಮಿಸಿದ್ದು, ಫೆಬ್ರವರಿ ತಿಂಗಳಲ್ಲಿ ಈ ದೇವಸ್ಥಾನದ ಬ್ರಹ್ಮಕಲಶೋತ್ಸವ ನಡೆಸಲು ನಿರ್ಧರಿಸಿದ್ದರು. ಈ ಸಂಬಂಧ ಬುಧವಾರ ಸಂಜೆ ಸಭೆ ನಡೆದಿದ್ದು, ಸ್ವಾಮೀಜಿ ಅವರು ಅಸ್ವಸ್ಥರಾಗಿದ್ದರಿಂದ ಸಭೆಯಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ. ಇನ್ನು ಸ್ವಾಮೀಜಿ ಅವರ ಹಠಾತ್ ನಿಧನದಿಂದ ಅಪಾರ ಸಂಖ್ಯೆಯ ಶಿಷ್ಯವರ್ಗ ಶೋಕ ಸಾಗರದಲ್ಲಿ ಮುಳುಗಿಸಿದೆ. Share this:TweetWhatsAppEmailPrintTelegram