ಶಿಮ್ಲಾ, ಜುಲೈ 06; ಹಿಮಾಚಲ ಪ್ರದೇಶದಲ್ಲಿ ಮೇಘ ಸ್ಫೋಟವಾಗಿದೆ. ರಾಜ್ಯದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಕಾರಣ ಇದುವರೆಗೂ 6 ಜನರು ನಾಪತ್ತೆಯಾಗಿದ್ದಾರೆ.
ರಾಜ್ಯದ ಶಿಮ್ಲಾ, ಮಣಿಕರನ್ ಮುಂತಾದ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಬುಧವಾರ ಮುಂಜಾನೆಯಿಂದ ಹಲವು ಪ್ರದೇಶಗಳಲ್ಲಿ ಮಳೆ ಬಿರುಸಾಗಿದ್ದು, ಪ್ರವಾಹ ಪರಿಸ್ಥಿತಿ ಉಂಟಾಗಿದೆ.
ರಾಜ್ಯದಲ್ಲಿ ಮಳೆ, ಪ್ರವಾಹದಿಂದ ಇದುವರೆಗೂ 6 ಜನರು ನಾಪತ್ತೆಯಾಗಿದ್ದಾರೆ ಎಂದು ರಾಜ್ಯ ಪ್ರಾಕೃತಿಕ ವಿಕೋಪ ಪರಿಹಾರ ಕೇಂದ್ರದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಪ್ರವಾಹ ಪರಿಸ್ಥಿತಿ ಎದುರಿಸಲು ಸನ್ನದ್ಧವಾಗಿರುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. Breaking; ವಿಡಿಯೋ, ಮುಂಬೈನಲ್ಲಿ ಮಳೆಯ ಅಬ್ಬರ ವಿಡಿಯೋ; ರಾಜ್ಯದ ಕುಲ್ಲು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ ಶಿಮ್ಲಾದಲ್ಲಿ ಮಳೆಯಿಂದಾಗಿ ಭೂ ಕುಸಿತ ಉಂಟಾಗಿದೆ. ಒಬ್ಬರು ಮೃತಪಟ್ಟಿದ್ದಾರೆ ಎಂಬ ಮಾಹಿತಿ ಇದೆ.
ಮಂಗಳವಾರ ರಾತ್ರಿಯಿಂದ ರಾಜ್ಯದ ವಿವಿಧ ಪ್ರದೇಶಗಳಲ್ಲಿ ಮಳೆಯಾಗುತ್ತಿದೆ. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಕಲ್ಕಾ-ಶಿಮ್ಲಾ ರೈಲು ಮಾರ್ಗದಲ್ಲಿ ಪ್ರಾಯೋಗಿಕ ಸಂಚಾರ ಯಶಸ್ವಿ ಚೋಗ್ ಎಂಬ ಪ್ರದೇಶದಲ್ಲಿ ನಾಲ್ವರು ಜಾನುವಾರುಗಳ ಸಮೇತ ಕೊಚ್ಚಿ ಹೋಗಿದ್ದಾರೆ. ವಿದ್ಯುತ್ ಘಟಕವೊಂದರ ಕಾಮಗಾರಿಯಲ್ಲಿ ತೊಡಗಿರುವ 25-30 ಕಾರ್ಮಿಕರು ಪ್ರವಾಹ ಪರಿಸ್ಥಿತಿಯಲ್ಲಿ ಸಿಲುಕಿದ್ದು, ಅವರನ್ನು ರಕ್ಷಿಸುವ ಕಾರ್ಯಾಚರಣೆ ಆರಂಭಿಸಲಾಗಿದೆ. ಮಣಿಕರಣ್ ಪ್ರದೇಶದಲ್ಲಿ ಅತಿ ಹೆಚ್ಚಿನ ರಭಸದಲ್ಲಿ ನೀರು ಹರಿಯುತ್ತಿದೆ. ಶಿಮ್ಲಾದಲ್ಲಿ ಮಳೆಯ ಕಾರಣ ಭೂ ಕುಸಿತ ಉಂಟಾಗಿದ್ದು, ಒಬ್ಬ ಮಹಿಳೆ ಮೃತಪಟ್ಟಿದ್ದಾಳೆ. ಈ ಘಟನೆಯಲ್ಲಿ ಒಬ್ಬರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕುಲ್ಲು ಜಿಲ್ಲೆಯ ಎಸ್ಪಿ ಗುರುದೇವ್ ಶರ್ಮಾ ಮಾತನಾಡಿ, “ನಾಪತ್ತೆಯಾಗಿರುವ ಜನರಿಗಾಗಿ ಶೋಧ ಆರಂಭವಾಗಿದೆ.
ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿರುವ ಜನರ ರಕ್ಷಣಾ ಕಾರ್ಯ ನಡೆಯುತ್ತಿದೆ” ಎಂದು ಹೇಳಿದ್ದಾರೆ. ಪ್ರವಾಹದಿಂದ ಇದುವರೆಗೂ 7 ಮನೆಗಳಿಗೆ ಹಾನಿಯಾಗಿದೆ. ಮೂರು ರಸ್ತೆ ಯೋಜನೆಗಳ ಕಾಮಗಾರಿಗೆ ಸಹ ಅಡಚಣೆ ಉಂಟಾಗಿದೆ. ಡ್ಯಾಂಗಳಿಂದ ಯಾವುದೇ ಸಂದರ್ಭದಲ್ಲಿ ನೀರು ಹೊರಬಿಡಲಾಗುತ್ತದೆ. ಆದ್ದರಿಂದ ಎಚ್ಚರಿಕೆಯಿಂದ ಇರುವಂತೆ ಜನರಿಗೆ ಎಚ್ಚರಿಕೆ ನೀಡಲಾಗಿದೆ.