Log In
BREAKING NEWS >
"ಕರಾವಳಿಕಿರಣ ಡಾಟ್ ಕಾ೦"ನ ಎಲ್ಲಾ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ "ಶ್ರೀಅನ೦ತವೃತ"ದ ಶುಭಾಶಯಗಳು...

“ರಾಜ್ಯದಲ್ಲಿನ ಮಳೆ ಹಾನಿ ಪರಿಹಾರಕ್ಕೆ 55 ಕೋಟಿ ರೂ. ಹಣ ಬಿಡುಗಡೆ” : ಸಚಿವ ಆರ್.ಅಶೋಕ್

ಬೆಂಗಳೂರು : ರಾಜ್ಯದಲ್ಲಿನ ಮಳೆ ಹಾನಿ ಪರಿಹಾರಕ್ಕೆ 55 ಕೋಟಿ ರೂ. ಹಣ ಬಿಡುಗಡೆ ಮಾಡಲಾಗಿದೆ ಎಂದು ಕಂದಾಯ ಸಚಿವ ಹಾಗೂ ವಿಪತ್ತು ನಿರ್ವಹಣಾ ಪ್ರಾಧಿಕಾರದ ಉಪಾಧ್ಯಕ್ಷ ಆರ್.ಅಶೋಕ್ ಇಂದು ಹೇಳಿದ್ದಾರೆ.

“ರಾಜ್ಯಾದ್ಯಂತ ಭಾರೀ ಪ್ರಮಾಣದಲ್ಲಿ ಮುಂಗಾರು ಮಳೆಯಾಗುತ್ತಿದ್ದು ಇದರಿಂದ ಪ್ರವಾಹ ಪರಿಸ್ಥಿತಿ ಉಂಟಾಗಿ ಮಾನವ ಹಾನಿ, ಜಾನುವಾರು ಜೀವ ಹಾನಿ, ಬೆಳೆಹಾನಿ, ಮನೆ ಹಾನಿ ಹಾಗೂ ಸಾರ್ವಜನಿಕ ಮೂಲಸೌಕರ್ಯ ಹಾನಿಯಾಗಿದೆ. ಹಾಗಾಗಿ ಹೆಚ್ಚುವರಿಯಾಗಿ ಜಿಲ್ಲಾಧಿಕಾರಿಗಳ ಖಾತೆಗೆ ಕಂದಾಯ ಇಲಾಖೆಯಿಂದ (ವಿಪತ್ತು ನಿರ್ವಹಣಾ ಪ್ರಾಧಿಕಾರ) 55 ಕೋಟಿ ಬಿಡುಗಡೆ ಮಾಡಿದ್ದೇನೆ. ಇದರಿಂದ ಪರಿಹಾರ ಕಾರ್ಯಕ್ಕೆ ಇನ್ನಷ್ಟು ಅನುಕೂಲ ಆಗಲಿದೆ” ಎಂದು ಹೇಳಿದರು.

“ಸರ್ಕಾರ ಎಲ್ಲ ರೀತಿಯ ಪರಿಸ್ಥಿತಿ ಎದುರಿಸಲು ಸನ್ನದ್ಧವಾಗಿದೆ. ಈಗಾಗಲೇ 680.59 ಕೋಟಿ ಹಣ ಜಿಲ್ಲಾಧಿಕಾರಿಗಳ ಖಾತೆಯಲ್ಲಿ ಇತ್ತು. ಈಗ 55 ಕೋಟಿ ಬಿಡುಗಡೆ ಮಾಡಿದ್ದು, ಒಟ್ಟು 735.59 ಕೋಟಿ ಹಣ ಲಭ್ಯವಿದೆ” ಎಂದು ಹೇಳಿಕೆ ನೀಡಿದರು.

No Comments

Leave A Comment