Log In
BREAKING NEWS >
"ಕರಾವಳಿಕಿರಣ ಡಾಟ್ ಕಾ೦"ನ ಎಲ್ಲಾ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ "ಶ್ರೀಅನ೦ತವೃತ"ದ ಶುಭಾಶಯಗಳು...

ಹೆಬ್ರಿ: ಆಗುಂಬೆಘಾಟಿಯಲ್ಲಿ ಭೂಕುಸಿತ-ಸಂಚಾರ ಬಂದ್

ಹೆಬ್ರಿ:ಜು 10 . ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಆಗುಂಬೆ ಘಾಟಿಯ ಮೂರು ಮತ್ತು ನಾಲ್ಕನೇ ಸುತ್ತಿನ ಮಧ್ಯದಲ್ಲಿ ಭೂಕುಸಿತ ಸಂಭವಿಸಿದ್ದು, ವಾಹನ ಸಂಚಾರ ಸ್ಥಗಿತವಾಗಿದೆ.

ತಡರಾತ್ರಿ ಭೂಕುಸಿತ ಸಂಭವಿಸಿದ್ದು, ರಾತ್ರಿಯಿಂದಲೇ ವಾಹನ ಸಂಚಾರಕ್ಕೆ ತೊಡಕಾಗಿತ್ತು. ಭಾರೀ ಪ್ರಮಾಣದಲ್ಲಿ ಮಣ್ಣು ರಸ್ತೆಗೆ ಬಿದ್ದಿದೆ. ಮರ ಕೂಡಾ ರಸ್ತೆಗೆ ಉರುಳಿ ಬಿದ್ದ ಕಾರಣ ಸಂಚಾರ ಸಂಕಷ್ಟ ತಂದೊಡ್ಡಿದೆ. ಹೀಗಾಗಿ ಶಿವಮೊಗ್ಗ, ಆಗುಂಬೆ ಕಡೆಯಿಂದ ಸಿದ್ದಾಪುರ ಮೂಲಕ ಉಡುಪಿಗೆ ವಾಹನಗಳು ಸಂಚರಿಸುತ್ತಿವೆ.

ಇನ್ನು ಭೂಕುಸಿತದ ಬಗ್ಗೆ ಮಾಹಿತಿ ಇಲ್ಲದ ಕಾರಣ ಉಡುಪಿಯಿಂದ ಶಿವಮೊಗ್ಗಕ್ಕೆ ತೆರಳುವ ಬಸ್ ಮತ್ತು ಇತರ ವಾಹನಗಳು ಘಾಟಿ ತಲುಪಿ ವಾಪಸ್ಸಾಗಿವೆ. ಸ್ಥಳಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಮಣ್ಣು ತೆರವು ಕಾರ್ಯಾಚರಣೆ ನಡೆಯುತ್ತಿದೆ.

No Comments

Leave A Comment