‘ಟ್ರ್ಯಾಕ್ಟರ್ ಯಾತ್ರೆಗಳು ಮುಗಿದ ನಂತರ ಡಿ. ಕೆ. ಶಿವಕುಮಾರ್ ನೇತೃತ್ವದಲ್ಲಿ ಎರಡು ತಂಡಗಳು ಎಲ್ಲ 224 ವಿಧಾನಸಭೆ ಕ್ಷೇತ್ರಗಳಲ್ಲೂ ರಥ ಯಾತ್ರೆ ಮಾಡಲಿದ್ದೇವೆ. ತಲಾ ಹದಿನಾಲ್ಕು ಲೋಕಸಭೆ ಕ್ಷೇತ್ರಗಳ ವ್ಯಾಪ್ತಿಯಲ್ಲಿ ನಿರ್ವಹಿಸಲಿದ್ದೇವೆ. ಡಿಸೆಂಬರ್ ಮೊದಲ ವಾರದಿಂದ ಇದು ಆರಂಭವಾಗಲಿದೆ’ ಎಂದರು.ನಾವು ಬಿಜೆಪಿಯವರ ಸಂಕಲ್ಪ ಯಾತ್ರೆಗೆ ಪರ್ಯಾಯವಾಗಿ ನಾವು ಮಾಡುತ್ತಿಲ್ಲ, ಬಿಜೆಪಿ ಸರ್ಕಾರದ ದುರಾಡಳಿತ, ಭ್ರಷ್ಟಾಚಾರ ಹಾಗೂ ರಾಜ್ಯದಲ್ಲಿ ತಲೆ ದೋರಿರುವ ನಿರುದ್ಯೋಗ ಸಮಸ್ಯೆಗಳನ್ನು ಜನರಿಗೆ ತೋರಿಸಲು ಯಾತ್ರೆ ಹಮ್ಮಿಕೊಳ್ಳುವುದಾಗಿ ತಿಳಿಸಿದ್ದಾರೆ.