ಮಂಗಳೂರು: ಸುರತ್ಕಲ್ ಟೋಲ್ಗೇಟ್ಗೆ ಮುತ್ತಿಗೆ – ಪ್ರತಿಭಟನಾಕಾರರು ಪೊಲೀಸ್ ವಶಕ್ಕೆ
ಸುರತ್ಕಲ್:ಅ 18: ಸುರತ್ಕಲ್ ಟೋಲ್ ಗೇಟ್ ತೆರವುಗೊಳಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯ ಪ್ರಮುಖರು ಸೇರಿದಂತೆ ಅನೇಕ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪದುಕೊಂಡಿದ್ದಾರೆ.
ಪೊಲೀಸ್ ಬ್ಯಾರಿಕೇಡ್ ಗಳನ್ನು ತಳ್ಳಿ ಟೋಲ್ ಗೇಟ್ ಗೆ ಮುತ್ತಿಗೆ ಹಾಕಲು ಯತ್ನಿಸಿದ ಪ್ರತಿಭಟನಾಕಾರರನ್ನು ಪೊಲೀಸರು ತಡೆದಿದ್ದಾರೆ.
ಹೋರಾಟ ಸಮಿತಿಯ ಪ್ರಮುಖರಾದ ಮುನೀರ್ ಕಾಟಿಪಳ್ಳ, ಪ್ರತಿಭಾ ಕುಳಾಯಿ, ಮಾಜಿ ಶಾಸಕರಾದ ಐವನ್ ಡಿಸೋಜ, ಶಕುಂತಳಾ ಶೆಟ್ಟಿ, ಜೆ.ಆರ್.ಲೋಬೊ, ಮೊಯ್ದಿನ್ ಬಾವ, ಮಿಥುನ್ ರೈ, ಶಶಿಧರ್ ಹೆಗ್ಡೆ ಸೇರಿದಂತೆ ಪ್ರತಿಭಟನಾಕಾರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಇನ್ನು ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ಪೊಲೀಸ್ ಸಿವಿಲ್ ಸಿಬ್ಬಂದಿ, ಸಿಎಆರ್, ಕೆಎಸ್ಆರ್ಪಿ ಪೊಲೀಸರನ್ನು ಸ್ಥಳದಲ್ಲಿ ನಿಯೋಜಿಸಲಾಗಿದ್ದು, ಬಿಗಿ ಭದ್ರತೆ ಕೈಗೊಳ್ಳಲಾಗಿದೆ.