Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಬಂಟ್ವಾಳ: ಬಸ್ ಮತ್ತು ಕಾರುಗಳ ನಡುವೆ ಅಪಘಾತ – ಓರ್ವ ಗಂಭೀರ, ನಾಲ್ವರಿಗೆ ಗಾಯ

ಬಂಟ್ವಾಳ, ಅ 21: ಬಂಟ್ವಾಳದ ಮಣಿಹಳ್ಳದಲ್ಲಿ ಭೀಕರ ಅಪಘಾತ ಸಂಭವಿಸಿ ಓರ್ವ ಗಂಭೀರ ಸ್ಥಿತಿಯಲ್ಲಿದ್ದು, ಉಳಿದ ನಾಲ್ವರು ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.

ಬಂಟ್ವಾಳ ಪುರಸಭಾ ವ್ಯಾಪ್ತಿಯ ಮಣಿಹಳ್ಳ ಎಂಬ ಪ್ರದೇಶದಲ್ಲಿ ಎರಡು ಕಾರು ಹಾಗೂ ಬಸ್‌‌ಗಳ ನಡುವೆ ಭೀಕರ ಅಪಘಾತ ನಡೆದಿದ್ದು, ಕಾರಿನಲ್ಲಿದ್ದ ವಿಟ್ಲ ಮೆಸ್ಕಾಂ ಇಲಾಖೆಯ ಎ.ಇ.ಪ್ರವೀಣ್ ಜೋಶಿ ಅವರು ಗಂಭೀರವಾಗಿ ಗಾಯಗೊಂಡಿದ್ದು, ಇನ್ನೊಂದು ಕಾರಿನಲ್ಲಿದ್ದ ನಾಲ್ವರು ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇನ್ನು ಬಂಟ್ವಾಳ ಕಡೆಯಿಂದ ವಗ ಕಡೆಗೆ ಹೋಗುತ್ತಿದ್ದ ಬ್ರಿಝಾ ಕಾರು, ವಗ್ಗದ ಮದ್ದ ಮನೆಯಿಂದ ಬರುತ್ತಿದ್ದ ಮೆಸ್ಕಾಂ ಎ.ಇ.ಪ್ರವೀಣ್ ಜೋಶಿ ಅವರ ಕಾರುಗಳ ನಡುವೆ ಭೀಕರ ಅಪಘಾತ ನಡೆದಿದೆ. ಬಳಿಕ ಹಿಂಬದಿಯಿಂದ ಬಸ್ ಕಾರುಗಳಿಗೆ ಡಿಕ್ಕಿ ಹೊಡೆದಿದೆ.

ಅಪಘಾತದಲ್ಲಿ ಫಿಗೋ ಕಾರಿನಲ್ಲಿದ್ದ ಜೋಶಿ ಅವರ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನೊಳಗಿಂದ ತೆಗೆಯಲು ಸಾರ್ವಜನಿಕರು ಹರಸಾಹಸ ಪಡೆಯಬೇಕಾಯಿತು. 112 ಹೊಯ್ಸಳ ಪೋಲೀಸ್ ವಾಹನ ಚಾಲಕ ವಿಶ್ವನಾಥ ಅವರು ಗಾಯಳು ಜೋಶಿ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ವಿಜಯಲಕ್ಷ್ಮಿ ಗ್ರೂಪ್ ನ ಕ್ರೇನ್ ಬಳಸಿ ಅಪಘಾತ ನಡೆದ ವಾಹನಗಳನ್ನು ರಸ್ತೆಯಿಂದ ಬದಿಗೆ ಸೇರಿಸಲಾಯಿತು. ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಎಸ್.ಐ ಮೂರ್ತಿ ಹಾಗೂ ಸಿಬ್ಬಂದಿ ಗಳು ಬೇಟಿ ನೀಡಿದ್ದಾರೆ.

No Comments

Leave A Comment