Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಉಳ್ಳಾಲ: ಪತ್ನಿ ಕೊಂದು ಪತಿ ಆತ್ಮಹತ್ಯೆ – ಸಂಶಯದಿಂದ ಕೃತ್ಯ?

ಉಳ್ಳಾಲ, ಅ 27. ಉಳ್ಳಾಲ ಠಾಣಾ ವ್ಯಾಪ್ತಿಯ ಪಿಲಾರು ಪಂಜಮ್ದಾಯ ದೈವಸ್ಥಾನದ ಬಳಿ ಪತ್ನಿಯ ಮೇಲಿನ ಸಂಶಯದಿಂದ ಆಕೆಯನ್ನು ಕತ್ತು ಹಿಸುಕಿ ಕೊಂದು ಬಳಿಕ ತಾನೂ ಆತ್ಮಹತ್ಯೆಗೈದ ಘಟನೆ ನಡೆದಿದೆ.

ಪಿಲಾರು ನಿವಾಸಿಗಳಾದ ಶೋಭಾ ಪೂಜಾರಿ(45) ಕೊಲೆಯಾದ ಮಹಿಳೆ ಮತ್ತು ಆಕೆಯ ಪತಿ ಶಿವಾನಂದ ಪೂಜಾರಿ (55) ಆತ್ಮಹತ್ಯೆಗೈದವರು.

ಇಂದು ಮಧ್ಯಾಹ್ನ 12 ಗಂಟೆ ವೇಳೆಗೆ ಶೋಭಾ ಅವರ ಹಿರಿಯ ಮಗ ಕಾರ್ತಿಕ್ ತಾಯಿಗೆ ಕರೆ ಮಾಡಿದ್ದು ಕರೆ ಸ್ವೀಕರಿಸದ ಹಿನ್ನೆಲೆಯಲ್ಲಿ ಪಕ್ಕದ ಮನೆಯವರಿಗೆ ವಿಚಾರಿಸಲು ತಿಳಿಸಿದ್ದಾನೆ. ಪಕ್ಕದ ಮನೆಯ ಶಕುಂತಳ ಶೆಟ್ಟಿ ಅವರು ಶೋಭಾ ಅವರ ಮನೆಯೊಳಗೆ ಪ್ರವೇಶಿಸಿದಾಗ ಶೋಭಾ ಅವರು ಬೆಡ್ ರೂಮಿನ‌ ಮಂಚದಲ್ಲಿ ಹೆಣವಾಗಿದ್ದರು. ಗಾಬರಿಗೊಂಡ ಶಕುಂತಳಾ ಅವರು ಮನೆಮಂದಿಗೆ ತಿಳಿಸಿದಾಗ ಪಕ್ಕದ ತೋಟದಲ್ಲಿ ಮರಕ್ಕೆ ಗಂಡ ಶಿವಾನಂದ ಅವರು ನೇಣು ಬಿಗಿದುಕೊಂಡಿದ್ದು ತಿಳಿದುಬಂದಿದೆ.

ಇನ್ನು ಶಿವಾನಂದ ಪೂಜಾರಿ ಅವರು ಪೈಂಟರ್ ಕೆಲಸ ಮಾಡುತ್ತಿದ್ದು ಪತ್ನಿ ಅಲ್ಲದೆ ಮಗಳ ಮೇಲೂ ನಿರಂತರವಾಗಿ ಸಂಶಯ ಪಡುತ್ತಿದ್ದರು ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಫಾರೆನ್ಸಿಕ್‌ ತಂಡ ಭೇಟಿ ನೀಡಿ ಎರಡು ಮೃತದೇಹಗಳನ್ನು ಪರಿಶೀಲಿಸುತ್ತಿದ್ದು, ಎಸಿಪಿ ದಿನಕರ್‌ ಶೆಟ್ಟಿ ನೇತೃತ್ವದಲ್ಲಿ ಉಳ್ಳಾಲ ಪೊಲೀಸ್‌ ಠಾಣೆಯ ತಂಡ ತನಿಖೆ ಕೈಗೆತ್ತಿಕೊಂಡಿದೆ. ಫಾರೆನ್ಸಿಕ್‌ ತಂಡ ನೀಡಿದ ವರದಿ ನಂತರವಷ್ಟೇ ಶೋಭಾ ಕೊಲೆ ಎಂಬುದುನ್ನು ಸ್ಪಷ್ಟಪಡಿಸಬಹುದು ಅನ್ನುವ ಮಾಹಿತಿಯನ್ನು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

No Comments

Leave A Comment