Log In
BREAKING NEWS >
ಎಲ್ಲೆಡೆಯಲ್ಲಿ ಶಾ೦ತಿಯುತವಾಗಿ ವಿಜೃ೦ಭಣೆಯ ಹನುಮಾನ್ ಜಯ೦ತಿ ಆಚರಣೆ.....

ರಸ್ತೆಗುಂಡಿಗೆ ರಾಜ್ಯದಲ್ಲಿ ಮತ್ತೊಂದು ಬಲಿ: ನಿವೃತ್ತ ಯೋಧನ ಮೇಲೆ ಟ್ರಕ್ ಹರಿದು ಸಾವು!

ಮಂಡ್ಯ: ರಾಜ್ಯದಲ್ಲಿ ರಸ್ತೆ ಗುಂಡಿ ಸಾವಿನ ಸರಣಿ ಮುಂದುವರೆದಿದ್ದು, ಮಂಡ್ಯದಲ್ಲಿ ರಸ್ತೆಗೆ ಗುಂಡಿಗೆ ನಿವೃತ್ತ ಯೋಧನೋರ್ವ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ.

ಮಂಡ್ಯದ ಕಾರೆಮನೆ ಗೇಟ್ ಬಳಿ ಈ ಘಟನೆ ನಡೆದಿದ್ದು, ಎಸ್.ಎನ್ ಕುಮಾರ್ (39) ಮೃತ ನಿವೃತ್ತ ಯೋಧ. ತಂದೆ ಜೊತೆ ಬೈಕ್‍ನಲ್ಲಿ ತೆರಳುತ್ತಿದ್ದಾಗ ಕುಮಾರ್ ಈ ಘಟನೆ ಜರುಗಿದೆ. ಸಾತನೂರಿನಿಂದ ಮಂಡ್ಯಗೆ ಬರುತ್ತಿದ್ದ ವೇಳೆ ಕಾರೆಮನೆ ಗೇಟ್ ಬಳಿ ರಸ್ತೆ ಗುಂಡಿ ತಪ್ಪಿಸಲು ಹೋಗಿ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ.

ಗುಂಡಿಯನ್ನು ತಪ್ಪಿಸಲು ಹೋಗಿ ಎದುರಿನಿಂದ ಬಂದ ಬೈಕ್‍ ಗೆ ಡಿಕ್ಕಿ ಹೊಡೆದು ಕೆಳಗೆ ಬಿದ್ದ ಕುಮಾರ್‍ ಗೆ ಹಿಂದಿನಿಂದ ಬಂದ ಲಾರಿ ಹರಿದ ಪರಿಣಾಮ ಸ್ಥಳದಲ್ಲೇ ಸಾವವನ್ನಪ್ಪಿದ್ದಾರೆ. ತಂದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸೇನೆಯಲ್ಲಿ ಸೇವೆ ಸಲ್ಲಿಸಿ ಇತ್ತೀಚೆಗೆ ನಿವೃತ್ತರಾಗಿದ್ದ ಕುಮಾರ್, ನಿವೃತ್ತಿ ಬಳಿಕ ಪೊಲೀಸ್ ಪೇದೆಯಾಗಿ ತರಬೇತಿಗೆ ಹೋಗುತ್ತಿದ್ದರು. ನಿನ್ನೆ ಸ್ವಗ್ರಾಮ ಸಾತನೂರು ಗ್ರಾಮಕ್ಕೆ ಕುಮಾರ್ ಬಂದಿದ್ದ ವೇಳೆ ಈ ಘಟನೆ ಜರುಗಿದ್ದು, ಮಂಡ್ಯ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

No Comments

Leave A Comment