Log In
BREAKING NEWS >
ಉಡುಪಿ ಜಿಲ್ಲೆಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಪರಮೇಶ್ವರ್ ಅನಂತ್ ಹೆಗ್ಡೆ ನೇಮಕ...

ಬ್ರಹ್ಮಾವರ :ತೀರ್ಥಯಾತ್ರೆಗೆ ತೆರಳಿದ್ದ ವೇಳೆ ಮನೆಯಲ್ಲಿ ಕಳ್ಳತನ

ಬ್ರಹ್ಮಾವರ,ನ 14. ಮನೆಮಂದಿ ಕುಟುಂಬ ಸಮೇತ ತೀರ್ಥಯಾತ್ರೆಗೆ ತೆರಳಿದ್ದ ವೇಳೆ ಮನೆಯಿಂದ ಚಿನ್ನಾಭರಣ ಕಳವುಗೈದ ಘಟನೆ ಬ್ರಹ್ಮಾವರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬಾರಕೂರು ಹೊಸಾಳ ಗ್ರಾಮ ವಿಜೇಂದ್ರ ಕುಮಾರ್ ಮನೆಯಲ್ಲಿ ಘಟನೆ ನಡೆದಿದ್ದು, ಮನೆಮಂದಿ ಸಮೇತ ನ.ರಂದು ತಿರುಪತಿ ಯಾತ್ರೆಗೆ ಹೋಗಿದ್ದು ನ. ೧೩ರಂದು ಹಿಂತಿರುಗಿ ಬಂದಾಗ ಯಾರೋ ಕಳ್ಳರು ಮನೆಯ ಎದುರಿನ ಪ್ರವೇಶ ಬಾಗಿಲಿನ ಚಿಲಕದ ಕೊಂಡಿಯನ್ನು ಮುರಿದು ಒಳ ಪ್ರವೇಶಿಸಿ ಕಳ್ಳತನವೆಸಗಿದ್ದಾರೆ ಎಂದು ದೂರು ನೀಡಿದ್ದಾರೆ.

ಬೆಡ್ ರೂಂ ನ ಕಪಾಟಿನಲ್ಲಿಟ್ಟಿದ್ದ, 3 ಚಿನ್ನದ ರೋಪ್‌ ಸರಗಳು , ೨ ಬಳೆಗಳು, ಚಿನ್ನದ ಉಂಗುರ, ಕಿವಿಯ ಬೆಂಡೊಲೆ ಹೀಗೆ 1,48,000 ಮೌಲ್ಯದ ಚಿನ್ನಾಭರಣ ಕಳವುಗೈದಿರುವ ಬಗ್ಗೆ ಬ್ರಹ್ಮಾವರ ಪೊಲೀಸ್‌ ಠಾಣೆ ಪ್ರಕರಣ ದಾಖಲಾಗಿದೆ.

No Comments

Leave A Comment