Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಬ್ರಹ್ಮಾವರ :ತೀರ್ಥಯಾತ್ರೆಗೆ ತೆರಳಿದ್ದ ವೇಳೆ ಮನೆಯಲ್ಲಿ ಕಳ್ಳತನ

ಬ್ರಹ್ಮಾವರ,ನ 14. ಮನೆಮಂದಿ ಕುಟುಂಬ ಸಮೇತ ತೀರ್ಥಯಾತ್ರೆಗೆ ತೆರಳಿದ್ದ ವೇಳೆ ಮನೆಯಿಂದ ಚಿನ್ನಾಭರಣ ಕಳವುಗೈದ ಘಟನೆ ಬ್ರಹ್ಮಾವರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬಾರಕೂರು ಹೊಸಾಳ ಗ್ರಾಮ ವಿಜೇಂದ್ರ ಕುಮಾರ್ ಮನೆಯಲ್ಲಿ ಘಟನೆ ನಡೆದಿದ್ದು, ಮನೆಮಂದಿ ಸಮೇತ ನ.ರಂದು ತಿರುಪತಿ ಯಾತ್ರೆಗೆ ಹೋಗಿದ್ದು ನ. ೧೩ರಂದು ಹಿಂತಿರುಗಿ ಬಂದಾಗ ಯಾರೋ ಕಳ್ಳರು ಮನೆಯ ಎದುರಿನ ಪ್ರವೇಶ ಬಾಗಿಲಿನ ಚಿಲಕದ ಕೊಂಡಿಯನ್ನು ಮುರಿದು ಒಳ ಪ್ರವೇಶಿಸಿ ಕಳ್ಳತನವೆಸಗಿದ್ದಾರೆ ಎಂದು ದೂರು ನೀಡಿದ್ದಾರೆ.

ಬೆಡ್ ರೂಂ ನ ಕಪಾಟಿನಲ್ಲಿಟ್ಟಿದ್ದ, 3 ಚಿನ್ನದ ರೋಪ್‌ ಸರಗಳು , ೨ ಬಳೆಗಳು, ಚಿನ್ನದ ಉಂಗುರ, ಕಿವಿಯ ಬೆಂಡೊಲೆ ಹೀಗೆ 1,48,000 ಮೌಲ್ಯದ ಚಿನ್ನಾಭರಣ ಕಳವುಗೈದಿರುವ ಬಗ್ಗೆ ಬ್ರಹ್ಮಾವರ ಪೊಲೀಸ್‌ ಠಾಣೆ ಪ್ರಕರಣ ದಾಖಲಾಗಿದೆ.

No Comments

Leave A Comment