Log In
BREAKING NEWS >
"ಕರಾವಳಿಕಿರಣ ಡಾಟ್ ಕಾ೦"ನ ಎಲ್ಲಾ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ "ಶ್ರೀಅನ೦ತವೃತ"ದ ಶುಭಾಶಯಗಳು...

ಕಟಪಾಡಿ: ಬೈಕ್ ಢಿಕ್ಕಿ – ಪಾದಾಚಾರಿ ಮೃತ್ಯು

ಕಟಪಾಡಿ, ಡಿ 10. ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿಯಲ್ಲಿ ಬೈಕ್ ಢಿಕ್ಕಿ ಹೊಡೆದು ಪಾದಾಚಾರಿಯೊಬ್ಬರು ಮೃತಪಟ್ಟ ಘಟನೆ ಶನಿವಾರ ನಡೆದಿದೆ.

ಮೃತರನ್ನು ಕಟಪಾಡಿ ಏಣಗುಡ್ಡೆ ಅಗ್ರಹಾರದ ಸತೀಶ್ ಎಂದುಗುರುತಿಸಲಾಗಿದೆ.

ಪಾದಾಚಾರಿ ಸತೀಶ್‌ ಕಟಪಾಡಿಯಲ್ಲಿ ರಸ್ತೆ ದಾಟುತ್ತಿರುವಾಗ ಬೈಕ್‌ ಢಿಕ್ಕಿ ಹೊಡೆದಿದ್ದು, ಈ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಉಡುಪಿಯ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆಂದು ಕರೆದೊಯ್ಯಲಾಗಿತ್ತು ಆದರೆ ಅಷ್ಟರಲ್ಲಿಯೇ ಮೃತಪಟ್ಟಿದ್ದಾರೆ.

ಕಟಪಾಡಿ ಹೊರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

No Comments

Leave A Comment