Log In
BREAKING NEWS >
ಮಾರ್ಚ್ 22ರ೦ದು ಚ೦ದ್ರಾಮಾನ ಯುಗಾದಿ ,ಏಪ್ರಿಲ್ 15ರ೦ದು ಸೌರಮಾನ ಯುಗಾದಿ ಹಬ್ಬವು ನಡೆಯಲಿದೆ.ಹಲವಾರು ಗಣ್ಯರು ಯುಗಾದಿ ಹಬ್ಬದ ಶುಭಾಶಯವನ್ನು ಕೋರಿರುತ್ತಾರೆ.....

ಸುಖ್ವಿಂದರ್ ಸಿಂಗ್ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ನಾನೇಕೆ ಹೋಗಬಾರದು? ಪ್ರತಿಭಾ ವೀರಭದ್ರ ಸಿಂಗ್

ಶಿಮ್ಲಾ: ಹಿಮಾಚಲ ಪ್ರದೇಶದ  ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸುತ್ತಿರುವ ಸುಖ್ವಿಂದರ್ ಸಿಂಗ್ ರಾಜ್ಯ ಕಾಂಗ್ರೆಸ್ ಅಧ್ಯಕ್ಷೆ ಪ್ರತಿಭಾ ವೀರಭದ್ರ ಸಿಂಗ್ ಅವರನ್ನು ಭೇಟಿಯಾದರು.

ಈ ಸಂದರ್ಭದಲ್ಲಿ ಮಾತನಾಡಿದ ಸಿಂಗ್, ಪ್ರತಿಭಾ ವೀರಭದ್ರ ಸಿಂಗ್ ಪಕ್ಷದ ರಾಜ್ಯಾಧ್ಯಕ್ಷರಾಗಿದ್ದು, ಅವರ ಕೆಳಗೆ ನಾವೆಲ್ಲ ಕೆಲಸ ನಿರ್ವಹಿಸುತ್ತೇವೆ. ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಆಕೆಯನ್ನು ಆಹ್ವಾನಿಸಲು ಇಲ್ಲಿಗೆ ಬಂದಿರುವುದಾಗಿ ತಿಳಿಸಿದರು.

ನಂತರ ಮಾತನಾಡಿದ ಪ್ರತಿಭಾ ವೀರಭದ್ರ ಸಿಂಗ್, ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ನಾನೇಕೆ ಪಾಲ್ಗೊಳ್ಳಬಾರದು? ಎಂದು ಪ್ರಶ್ನಿಸಿದರು. ಖಂಡಿತವಾಗಿಯೂ ನಾನು ಹೋಗುತ್ತೇನೆ. ಸುಖ್ವಿಂದರ್ ಸಿಂಗ್ ಪ್ರಮಾಣ ವಚನ ಸ್ವೀಕರಿಸುತ್ತಿದ್ದು, ಅಲ್ಲಿಗೆ ಹೋಗುವುದು ನನ್ನ ಕರ್ತವ್ಯವಾಗಿದೆ ಎಂದರು.

No Comments

Leave A Comment