ಹೊಸಪೇಟೆ: ಕಾಲುವೆಯಲ್ಲಿ ಮುಳುಗಿ ಮೂವರು ವಿದ್ಯಾರ್ಥಿಗಳ ದುರ್ಮರಣ
ಬಳ್ಳಾರಿ: ಕಾಲುವೆಯಲ್ಲಿ ಈಜಲು ಹೋಗಿದ್ದ ಆರು ವಿದ್ಯಾರ್ಥಿಗಳ ಪೈಕಿ ಮೂವರು ನೀರುಪಾಲಾಗಿರುವ ದಾರುಣ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆಯ ಹೊರವಲಯದಲ್ಲಿ ನಡೆದಿದೆ.
ಮೃತರನ್ನು ಹೊಸಪೇಟೆಯ ಹಾಗೂ ಕೊಪ್ಪಳದ ನಿವಾಸಿಗಳಾದ ಯಶವಂತ್, ಅಂಜಿನಿ, ಗುರುರಾಜ್ ಎಂದು ಗುರುತಿಸಲಾಗಿದೆ.
ಹೊಸಪೇಟೆಯ ವಿಜಯನಗರ ಕಾಲೇಜಿನಲ್ಲಿ ಓದುತ್ತಿದ್ದ 6 ವಿದ್ಯಾರ್ಥಿಗಳ ತಂಡ ಈಜಲು ಹೋಗಿತ್ತು. ಈ ವೇಳೆ ಮೂವರು ನೀರಿನಲ್ಲಿ ಮಳುಗಿದ್ದು ಇನ್ನು ಮೂವರು ಬದುಕುಳಿದಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಹೊಸಪೇಟೆಯ ಗ್ರಾಮೀಣ ಪೊಲೀಸರು ಪರಿಶೀಲನೆ ನಡೆಸಿದರು.
ಇನ್ನು ಬದುಕುಳಿದಿರುವ ಮೂವರು ವಿದ್ಯಾರ್ಥಿಗಳನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸಿದ್ದಾರೆ.