Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಚೆಕ್ ಬೌನ್ಸ್ ಪ್ರಕರಣದಲ್ಲಿ ಶಾಸಕ ಕೆವೈ ನಂಜೇಗೌಡ ತಪ್ಪಿತಸ್ಥ: ಬರೋಬ್ಬರಿ 49.65 ಲಕ್ಷ ರೂ. ದಂಡ ವಿಧಿಸಿದ ಕೋರ್ಟ್!

ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣದಲ್ಲಿ ಮಾಲೂರು ಶಾಸಕ ಕೆ.ವೈ ನಂಜೇಗೌಡ ತಪ್ಪಿತಸ್ಥ ಎಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ನೀಡಿದ್ದು ಇದೇ ವೇಳೆ 49.65 ಲಕ್ಷ ದಂಡ ವಿಧಿಸಿದೆ.

ರಾಮಚಂದ್ರ ಜಿ ಎಂಬುವರಿಂದ ನಂಜೇಗೌಡ ಅವರು 40 ಲಕ್ಷ ರೂಪಾಯಿ ಸಾಲ ಮರುಪಾವತಿಗೆ ಚೆಕ್ ನೀಡಿದ್ದರು. ಆದರೆ ಚೆಕ್ ಬೌನ್ಸ್ ಆಗಿದ್ದರಿಂದ ಅವರನ್ನು ತಪ್ಪಿತಸ್ಥ ಎಂದು ಕೋರ್ಟ್ ತೀರ್ಪು ನೀಡಿದೆ.

ಇದೇ ವೇಳೆ ದಂಡ ಪಾವತಿಸದಿದ್ದರೆ 6 ತಿಂಗಳ ಜೈಲು ಶಿಕ್ಷೆ ಅನುಭವಿಸಬೇಕು ಎಂದು 42ನೇ ಎಸಿಎಂಎಂ ಕೋರ್ಟ್ ಆದೇಶಿಸಿದೆ.

No Comments

Leave A Comment