Log In
BREAKING NEWS >
ಉಡುಪಿ ಜಿಲ್ಲೆಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಪರಮೇಶ್ವರ್ ಅನಂತ್ ಹೆಗ್ಡೆ ನೇಮಕ...

ಭೀಕರ ಅಪಘಾತ : ಬೈಕ್ ಸವಾರ ಸಾವು : ಓರ್ವನಿಗೆ ಗಂಭೀರ ಗಾಯ

ಬೆಳ್ತಂಗಡಿ: ಮಂಗಳವಾರ ಸಂಜೆ ಲಾಯಿಲದಲ್ಲಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟ ನಡೆದಿದೆ.

ಮೃತ ವ್ಯಕ್ತಿ ಉಜಿರೆ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿರುವ ವಿಜಯ ಎಂಬವರು ಎಂದು ತಿಳಿದುಬಂದಿದೆ.

ಉಜಿರೆಯಲ್ಲಿ ಕೆಲಸ ಮುಗಿಸಿ ಆತ ಮನೆಗೆ ಹಿಂತಿರುಗುತ್ತಿದ್ದ ವೇಳೆ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂವಿಸಿದೆ.

ಅಪಘಾತದಲ್ಲಿ ವಿಜಯ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಇನ್ನೋರ್ವ ಗಂಭೀರವಾಗಿ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ. ಬಸ್ ನೇರವಾಗಿ ಬಂದು ಬೈಕಿಗೆ ಡಿಕ್ಕಿ ಹೊಡೆದಿದ್ದು, ಹೊಡೆತದ ರಭಸಕ್ಕೆ ಬೈಕ್ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ.

No Comments

Leave A Comment