Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಜಮ್ಮುವಿನಲ್ಲಿ ಎನ್ಕೌಂಟರ್: ನಾಲ್ವರು ಉಗ್ರರ ಸದೆಬಡಿದ ಸೇನಾಪಡೆ

ಜಮ್ಮು: ಜಮ್ಮುವಿನ ಸಿದ್ರಾ ಪ್ರದೇಶದಲ್ಲಿ ಭಾರತೀಯ ಸೇನಾಪಡೆ ಬುಧವಾರ ಎನ್ಕೌಂಟರ್ ನಡೆಸಿದ್ದು, ನಾಲ್ವರು ಉಗ್ರರನ್ನು ಹತ್ಯೆ  ಮಾಡಿದೆ ಎಂದು ತಿಳಿದುಬಂದಿದೆ.

ಎನ್ಕೌಂಟರ್ ಕುರಿತು ಮಾಹಿತಿ ನೀಡಿರುವ ಎಜಿಡಿಪಿ ಮುಕೇಶ್ ಸಿಂಗ್ ಅವರು, ಹೆದ್ದಾರಿಯಲ್ಲಿ ಲಾರಿಯ ಸಂಚಾರವೊಂದು ಅನುಮಾನಾಸ್ಪದವಾಗಿ ಕಂಡು ಬಂದಿತ್ತು. ಕೂಡಲೇ ಲಾರಿಯನ್ನು ಹಿಂಬಾಲಿಸಲಾಗಿತ್ತು. ಜಮ್ಮುವಿನ ಸಿಧ್ರಾ ಪ್ರದೇಶದಲ್ಲಿ ಲಾರಿ ನಿಂತಿತು. ಲಾರಿ ನಿಂತ ಕೂಡಲೇ ಚಾಲಕ ಪರಾರಿಯಾದ. ಲಾರಿಯನ್ನು ಪರಿಶೀಲಿಸಿದಾಗ ಉಗ್ರರು ಅಡಗಿ ಕುಳಿತಿರುವುದು ಕಂಡು ಬಂದಿತ್ತು. ಕೂಡಲೇ ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಲು ಆರಂಭಿಸಿದರು ಎಂದು ಹೇಳಿದ್ದಾರೆ.

ಉಗ್ರರ ಬಳಿ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳಿದ್ದವು. ಉಗ್ರರು ದಾಳಿ ನಡೆಸಲು ಆರಂಭಿಸುತ್ತಿದ್ದಂತೆಯೇ ಸ್ಥಳವನ್ನು ಸುತ್ತುವರೆದು ಉಗ್ರರ ದಾಳಿಗೆ ದಿಟ್ಟ ಉತ್ತರ ನೀಡಲಾಯಿತು. ಇದರಂತೆ ನಾಲ್ವರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

No Comments

Leave A Comment