Log In
BREAKING NEWS >
ಜೂ.26ರ೦ದು ಉಡುಪಿ ಶ್ರೀಪುತ್ತಿಗೆ ಮಠದ ೪ನೇ ಪರ್ಯಾಯಕ್ಕೆ ಕಟ್ಟಿಗೆ ಮುಹೂರ್ತ ಕಾರ್ಯಕ್ರಮ ಜರಗಲಿದೆ.....

ಪಂಜಾಬ್: ಕ್ಯಾಬಿನೆಟ್ ಸಚಿವ ಫೌಜಾ ಸಿಂಗ್ ಸರಾರಿ ರಾಜೀನಾಮೆ

ಚಂಡಿಗಢ: ಆಮ್ ಆದ್ಮಿ ಪಕ್ಷದ ಮುಖಂಡ ಹಾಗೂ ಕ್ಯಾಬಿನೆಟ್ ಸಚಿವ ಫೌಜಾ ಸಿಂಗ್ ಸರಾರಿ ಶನಿವಾರ ತನ್ನ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ವೈಯಕ್ತಿಕ ಕಾರಣ ನೀಡಿ ಅವರು ಸಿಂಗ್ ಸರಾರಿ  ರಾಜೀನಾಮೆ ನೀಡಿರುವುದಾಗಿ ಮೂಲಗಳು ಹೇಳಿವೆ.  ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿದ್ದು, ಹಾಗೆಯೇ ಇರುವುದಾಗಿ ಸರಾರಿ ಹೇಳಿರುವುದಾಗಿ ವರದಿಯಾಗಿದೆ.

ಇಂದು ಸಂಜೆ 5 ಗಂಟೆಗೆ ರಾಜಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಹೊಸ ಸಚಿವರು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ. ಪಂಜಾಬ್ ಕ್ಯಾಬಿನೆಟ್ ಪುನರ್ ರಚನೆಯಾಗಲಿದ್ದು, ಹೊಸ ಮುಖಗಳು ಅವಕಾಶ ಪಡೆಯುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

No Comments

Leave A Comment