Log In
BREAKING NEWS >
ಉಡುಪಿ ಜಿಲ್ಲೆಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಪರಮೇಶ್ವರ್ ಅನಂತ್ ಹೆಗ್ಡೆ ನೇಮಕ...

ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಭಾರಿ ಮಳೆ: ಭತ್ತ, ಅಡಿಕೆ, ಕಾಫಿ, ಮೆಣಸು ಬೆಳೆಗಾರರು ಕಂಗಾಲು

ಕಾಫಿನಾಡ ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಂಗಳವಾರ ಭಾರಿ ಮಳೆಯಾಗಿದೆ. ಹಲವು ತಾಸು ಧಾರಾಕಾರ ಮಳೆ ಸುರಿದಿದೆ.

ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್, ಬಾಳೂರು, ಬಣಕಲ್, ಮತ್ತಿಕಟ್ಟೆ, ನಿಡುವಾಳೆ, ಗುತ್ತಿ, ಭೈರಾಪುರ, ಕಂದೂರು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಮಳೆ ಅಬ್ಬರ ಜೋರಾಗಿದೆ. ಜನವರಿಯಲ್ಲಿ ಮಳೆ ಕಂಡು ಮಲೆನಾಡಿಗರು ಕಂಗಾಲಾಗಿದ್ದಾರೆ. ಈ ಮಳೆಯಿಂದ ಭತ್ತ, ಅಡಿಕೆ, ಕಾಫಿ, ಮೆಣಸಿನ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ. ಮಳೆಯಿಂದ ರೈತರು, ಕೂಲಿ ಕಾರ್ಮಿಕರು, ಬೆಳೆಗಾwರರು ಹೈರಾಣರಾಗಿದ್ದಾರೆ.

2022ರಲ್ಲೂ ವರ್ಷ ಪೂರ್ತಿ ಮಳೆ ಸುರಿದಿತ್ತು.ಈ ವರ್ಷವೂ ಜನವರಿಯಲ್ಲೇ ಮಳೆ ಕಂಡು ಭವಿಷ್ಯದ ಬಗ್ಗೆ ಬೆಳೆಗಾರರು ಕಂಗಾಲಾಗಿದ್ದಾರೆ.ಅಳಿದುಳಿದ ಬೆಳೆಯನ್ನೂ ಉಳಿಸಿಕೊಳ್ಳಲಾಗದೆ ಚಿಂತಾಕ್ರಾಂತರಾಗಿದ್ದಾರೆ.

No Comments

Leave A Comment