Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಬ್ಯಾರಿ ಸಂಘಟಕ ಕಲಾಕಾರ್ ರಿಯಾಝ್ ಅಶ್ರಫ್ ನಿಧನ

ಮಂಗಳೂರು: ಬ್ಯಾರಿ ಸಾಂಸ್ಕೃತಿಕ ಕಲಾರಂಗದ ಸಾಧಕ ಕಲಾಕಾರ್ ರಿಯಾಝ್ ಅಶ್ರಫ್ (50) ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಇಂದು ಮಧ್ಯಾಹ್ನ‌ ನಿಧನರಾದರು.

ಮೃತರು ಪತ್ನಿ ಇಬ್ಬರು ಪುತ್ರರು ಮತ್ತು ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

ಕೆಲವು ಸಮಯದಿಂದ ತೀವ್ರ ಅನಾರೋಗ್ಯಕ್ಕೀಡಾದ ಇವರನ್ನು ಕಾಸರಗೋಡು, ಮಂಗಳೂರು, ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದರು.

ಕಾಟಿಪಳ್ಳದಲ್ಲಿ 1973ರಲ್ಲಿ ಹುಟ್ಟಿ ಬೆಳೆದ ಇವರು ತನ್ನ ವೃತ್ತಿಯ ಹಿನ್ನೆಲೆಯಲ್ಲಿ ‌ಮಂಗಳೂರಿನಲ್ಲಿ ನೆಲೆಸಿದ್ದರು. ಕನ್ನಡ, ಬ್ಯಾರಿ, ತುಳು, ಮಲಯಾಳಂ ಹಿಂದಿ ಭಾಷೆಯಲ್ಲಿ ಹಿಡಿತವುಳ್ಳ ಇವರು ಕವಿ, ಹಾಡುಗಾರ, ಲೇಖಕ, ಚಿತ್ರಗಾರರಾಗಿದ್ದ ಇವರು ಕಾರ್ಯಕ್ರಮ ನಿರೂಪಕರಾಗಿ ಗಮನ ಸೆಳೆದಿದ್ದರು.

No Comments

Leave A Comment