Log In
BREAKING NEWS >
ಮಾ.28ರ೦ದು ಸ೦ಜೆ 6.30ಕ್ಕೆ ಪಣಿಯಾಡಿ ಶ್ರೀಅನ೦ತಾಸನ ಶ್ರೀಲಕ್ಷ್ಮೀಪದ್ಮನಾಭ ದೇವಸ್ಥಾನದ ವಠಾರದಲ್ಲಿ ಶ್ರೀಏಕದ೦ತ ಸೇವಾ ಸಮಿತಿ ಪಣಿಯಾಡಿ ಉದ್ಘಾಟನಾ ಸಮಾರ೦ಭ ಜರಗಲಿದೆ....

ಬ್ಯಾರಿ ಸಂಘಟಕ ಕಲಾಕಾರ್ ರಿಯಾಝ್ ಅಶ್ರಫ್ ನಿಧನ

ಮಂಗಳೂರು: ಬ್ಯಾರಿ ಸಾಂಸ್ಕೃತಿಕ ಕಲಾರಂಗದ ಸಾಧಕ ಕಲಾಕಾರ್ ರಿಯಾಝ್ ಅಶ್ರಫ್ (50) ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಇಂದು ಮಧ್ಯಾಹ್ನ‌ ನಿಧನರಾದರು.

ಮೃತರು ಪತ್ನಿ ಇಬ್ಬರು ಪುತ್ರರು ಮತ್ತು ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

ಕೆಲವು ಸಮಯದಿಂದ ತೀವ್ರ ಅನಾರೋಗ್ಯಕ್ಕೀಡಾದ ಇವರನ್ನು ಕಾಸರಗೋಡು, ಮಂಗಳೂರು, ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದರು.

ಕಾಟಿಪಳ್ಳದಲ್ಲಿ 1973ರಲ್ಲಿ ಹುಟ್ಟಿ ಬೆಳೆದ ಇವರು ತನ್ನ ವೃತ್ತಿಯ ಹಿನ್ನೆಲೆಯಲ್ಲಿ ‌ಮಂಗಳೂರಿನಲ್ಲಿ ನೆಲೆಸಿದ್ದರು. ಕನ್ನಡ, ಬ್ಯಾರಿ, ತುಳು, ಮಲಯಾಳಂ ಹಿಂದಿ ಭಾಷೆಯಲ್ಲಿ ಹಿಡಿತವುಳ್ಳ ಇವರು ಕವಿ, ಹಾಡುಗಾರ, ಲೇಖಕ, ಚಿತ್ರಗಾರರಾಗಿದ್ದ ಇವರು ಕಾರ್ಯಕ್ರಮ ನಿರೂಪಕರಾಗಿ ಗಮನ ಸೆಳೆದಿದ್ದರು.

No Comments

Leave A Comment