Log In
BREAKING NEWS >
ನವೆ೦ಬರ್ 27ರ೦ದು ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ದೀಪೋತ್ಸವ ಕಾರ್ಯಕ್ರಮ ಜರಗಲಿದೆ...

ಮತದಾನ ಸಮೀಕ್ಷೆ ನಡೆಸುತ್ತಿದ್ದ ತಂಡವನ್ನು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು

ಮನೆಮನೆಗೆ ತೆರಳಿ ಮತದಾನ ಸಮೀಕ್ಷೆ ನಡೆಸುತ್ತಿದ್ದ ತಂಡವನ್ನು ಸಂಶಯಗೊಂಡ ಸ್ಥಳೀಯರು ಪೊಲೀಸರ ವಶಕ್ಕೆ ನೀಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸಾಲೆತ್ತೂರು ಎಂಬಲ್ಲಿ ನಡೆದಿದೆ.

ಸಾಲೆತ್ತೂರು ಭಾಗದಲ್ಲಿ 6 ಯುವತಿಯರ ಸಹಿತ 11 ಮಂದಿಯ ತಂಡವೊಂದು ಮನೆಮನೆಗೆ ತೆರಳಿ ಸಮೀಕ್ಷೆ ನಡೆಸುತ್ತಿತ್ತು‌. ಈ ಬಗ್ಗೆ ಸಂಶಯಗೊಂಡ ಸ್ಥಳೀಯರು ಅವರನ್ನು ವಿಚಾರಿಸಿದ್ದು, ಆಗ ಅವರು, ನಾವು ಧ್ರುವ ಕಂಪೆನಿ ವತಿಯಿಂದ ಬಂದಿದ್ದು, ಮತದಾನ ಸಮೀಕ್ಷೆ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ ಎನ್ನಲಾಗಿದೆ.

ಆ ಬಳಿಕ ಸ್ಥಳೀಯರು ಅವರನ್ನು ವಿಟ್ಲ ಪೊಲೀಸರ ವಶಕ್ಕೆ ನೀಡಿದ್ದಾರೆ. ಪೊಲೀಸರು ವಿಚಾರಣೆ ನಡೆಸಿ ಎಚ್ಚರಿಕೆ ನೀಡಿ ಕಳುಹಿಸಿಕೊಟ್ಟಿದ್ದಾರೆ.

No Comments

Leave A Comment