Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಗೌತಮ್ ಅದಾನಿ ಬಿಜೆಪಿಯ ಪವಿತ್ರ ಗೋವು: ಸಂಜಯ್ ರಾವುತ್ ಲೇವಡಿ

ನವದೆಹಲಿ: ಉದ್ಯಮಿ ಗೌತಮ್ ಅದಾನಿ ಬಿಜೆಪಿ ಪಾಲಿಗೆ ಪವಿತ್ರ ಗೋವು ಎಂದು ಶಿವಸೇನೆ ಸಂಸದ ಸಂಜಯ್ ರಾವುತ್ ಲೇವಡಿ ಮಾಡಿದ್ದಾರೆ.

ಈ ಬಾರಿ ಫೆಬ್ರವರಿ 14ರಂದು ಪ್ರೇಮಿಗಳ ದಿನ ಆಚರಿಸುವ ಬದಲಿಗೆ ಗೋವುಗಳನ್ನು ಅಪ್ಪಿಕೊಳ್ಳುವ ದಿನ ಎಂದು ಆಚರಿಸುವಂತೆ ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯದ ಅನಿಮಲ್ ವೆಲ್ ಫೇರ್ ಬೋರ್ಡ್ ಹೊರಡಿಸಿರುವ ಅಧಿಸೂಚನೆಗೆ ಸಂಜಯ್ ರಾವುತ್ ಗೇಲಿ ಮಾಡಿದ್ದಾರೆ.

ಅದಾನಿ ಕಂಪನಿಗಳ ವಿರುದ್ಧ ಹಿಂಡೆನ್‌ಬರ್ಗ್ ರಿಸರ್ಚ್ ಬಹಿರಂಗಪಡಿಸಿರುವ ವಂಚನೆ ಮತ್ತು ದುರುಪಯೋಗದ ಆರೋಪಗಳ ಕುರಿತು ಜಂಟಿ ಸಂಸದೀಯ ಸಮಿತಿ ತನಿಖೆ ಅಥವಾ ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯ ತನಿಖೆಗೆ ಕೊಡದೆ ಮೂಲಕ ಅದಾನಿ ಕಂಪನಿಯ ಎಲ್ಲಾ ಆರೋಪಗಳನ್ನು ಕೇಂದ್ರ ಸರ್ಕಾರ ತಳ್ಳಿಹಾಕಿದೆ.

ಬಿಜೆಪಿಗೆ ಅದಾನಿ ಪವಿತ್ರ ಗೋವು. ಅದಕ್ಕಾಗಿಯೇ ಅವರು ತಮ್ಮ ಪವಿತ್ರ ಗೋವನ್ನು ತಬ್ಬಿಕೊಂಡಿದ್ದಾರೆ. ಪ್ರೇಮಿಗಳ ದಿನದಂದು ನಾವು ಉಳಿದ ಗೋವುಗಳನ್ನು ತಬ್ಬಿಕೊಳ್ಳಲು ಹೇಳುತ್ತಿದ್ದಾರೆ. ಗೋಮಾತೆಯನ್ನು ನಾವು ಗೌರವಿಸುತ್ತೇವೆ ಮತ್ತು ನಮ್ಮ ಪ್ರೀತಿಯನ್ನು ತೋರಿಸಲು ನಮಗೆ ಯಾವುದೇ ವಿಶೇಷ ದಿನದ ಅಗತ್ಯವಿಲ್ಲ ಎಂದು ಸಂಜಯ್ ರಾವುತ್ ಹೇಳಿದರು.

ಫೆಬ್ರವರಿ 14 ರಂದು ಗೋವುಗಳನ್ನು ಅಪ್ಪಿಕೊಳ್ಳುವ ದಿನವನ್ನು ಆಚರಿಸುವುದರಿಂದ ಸಕಾರಾತ್ಮಕ ಶಕ್ತಿ ಹರಡುತ್ತದೆ. ಸಾಮೂಹಿಕ ಸಂತೋಷವನ್ನು ಉತ್ತೇಜಿಸುತ್ತದೆ ಎಂದು ಪ್ರಾಣಿ ಕಲ್ಯಾಣ ಮಂಡಳಿಯು ಹೊರಡಿಸಿದ ಸೂಚನೆಯಲ್ಲಿ ಹೇಳುತ್ತದೆ. ಪಾಶ್ಚಿಮಾತ್ಯ ಸಂಸ್ಕೃತಿಯ ಪ್ರಗತಿಯಿಂದಾಗಿ ವೈದಿಕ ಸಂಪ್ರದಾಯಗಳು ಬಹುತೇಕ ಅಳಿವಿನ ಅಂಚಿನಲ್ಲಿವೆ ಎಂದು ಸೂಚನೆಯಲ್ಲಿ ಉಲ್ಲೇಖಿಸಲಾಗಿದೆ. ಪಾಶ್ಚಿಮಾತ್ಯ ನಾಗರಿಕತೆಯ ಪ್ರಜ್ವಲಿಸುವಿಕೆಯು ನಮ್ಮ ಭೌತಿಕ ಸಂಸ್ಕೃತಿ ಮತ್ತು ಪರಂಪರೆಯನ್ನು ಬಹುತೇಕ ಮರೆತಿದೆ ಎಂದು ಹೇಳಿತ್ತು.

No Comments

Leave A Comment