ಮೈಸೂರು ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ : ಗಾಂಜಾ, ಆಯುಧ, ಮೊಬೈಲ್ ಪತ್ತೆ
ಮೈಸೂರು : ಮೈಸೂರಿನ ಕೇಂದ್ರ ಕಾರಾಗೃಹದ ಮೇಲೆ ನಗರ ಪೊಲೀಸರು ಏಕಾಏಕಿ ದಾಳಿ ನಡೆಸಿದ್ದು, ಕೈದಿಗಳಿಂದ ಮೊಬೈಲ್, ಹಣ, ಗಾಂಜಾ, ಚಾಕು ಕತ್ತರಿ ಮತ್ತು ಇನ್ನಿತರ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ನೇತೃತ್ವದಲ್ಲಿ ಡಿಸಿಪಿಗಳಾದ ಎಂ.ಮುತ್ತುರಾಜು, ಎಸ್.ಜಾಹ್ನವಿ ಸೇರಿದಂತೆ ಎಲ್ಲ ವಿಭಾಗದ ಎಸಿಪಿ, ಇನ್ಸ್ಪೆಕ್ಟರ್, ಸಬ್ಇನ್ಸ್ಪೆಕ್ಟರ್ಗಳು ಈ ಕಾರ್ಯಾಚರಣೆ ನಡೆಸಿದರು. ಕಮಾಂಡೋ ಪಡೆ ಹಾಗೂ ಮಾದಕ ವಸ್ತು ಪತ್ತೆ ಹಚ್ಚುವ ಶ್ವಾನದಳವೂ ಇತ್ತು.
ಈ ಕುರಿತು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಅನಿರೀಕ್ಷಿತ ದಾಳಿ ನಡೆಸಿ ತಪಾಸಣೆ ನಡೆಸಿದ್ದೇವೆ. ಗಾಂಜಾ, ನಗದು ಸೇರಿದಂತೆ ಚಮಚದಿಂದ ಮಾಡಿದ 8 ಮಾರಕಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಎಲ್ಲಿಂದ ವಸ್ತುಗಳು ಜೈಲಿಗೆ ಬರುತ್ತಿವೆ ಎಂಬುದನ್ನು ಪರಿಶೀಲನೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಇನ್ನೂ ಕಾರಾಗೃಹಕ್ಕೆ ಹೊಂದಿಕೊಂಡಿರುವ ಸ್ಮಶಾನದ ಕಡೆಯಿಂದ ಬರುತ್ತಿದೆ ಎಂಬುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ. ಜೈಲಿನಲ್ಲಿ ಮಾದಕವಸ್ತು, ಮೊಬೈಲ್ಗಳು ಸಿಗುವುದು ಗಂಭೀರ ವಿಷಯ. ಈ ಬಗ್ಗೆ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಇಲಾಖೆಗೆ ವರದಿ ನೀಡಲಾಗುವುದು ಎಂದರು.