Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ತೆಂಗಿನ ಮರಕ್ಕೆ ಅಕ್ರಮ ವಿದ್ಯುತ್ ಸಂಪರ್ಕ: ಆಹಾರ ಅರಸಿ ಬಂದ ಆನೆ ಬಲಿ

ಚಾಮರಾಜನಗರ: ಬೆಳೆ ರಕ್ಷಣೆಗಾಗಿ ಹಾಕಲಾಗಿದ್ದ ಅಕ್ರಮ ವಿದ್ಯುತ್ ಸಂಪರ್ಕ ಆನೆಯೊಂದನ್ನು ಬಲಿ ಪಡೆದುಕೊಂಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬರಗಿ ಗ್ರಾಮದಲ್ಲಿ ನಡೆದಿದೆ.

ಪುತ್ತನಪುರರಾಜು ಆರೋಪಿ. ತೆಂಗಿನ ಮರದಿಂದ ತೆಂಗಿನ ಮರಕ್ಕೆ ಎರಡು ಅಡಿ ಎತ್ತರದಲ್ಲಿ ಜಮೀನು ಮಾಲೀಕ ಅಕ್ರಮವಾಗಿ ವಿದ್ಯುತ್ ಹರಿಸಿದ್ದಿರಿಂದ ಆಹಾರ ಅರಸಿ ಬಂದ 25 ವರ್ಷದ ಹೆಣ್ಣಾನೆ ಬಲಿಯಾಗಿದೆ.

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಓಂಕಾರ್ ವಲಯ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಆರೋಪಿ ತಲೆಮರೆಸಿಕೊಂಡಿದ್ದಾನೆ.

No Comments

Leave A Comment