![](https://i0.wp.com/karavalikirana.com/kan/wp-content/uploads/2023/02/Untitled-3-15.jpg?fit=640%2C320&ssl=1)
ಪ್ರಧಾನಿ ವಿರುದ್ಧದ ಹೇಳಿಕೆ ಪ್ರಕರಣ: ಮಧ್ಯಂತರ ಜಾಮೀನು ಆಧಾರದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಬಿಡುಗಡೆಗೆ ಸುಪ್ರೀಂ ಆದೇಶ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಮಾತನಾಡಿ ಬಂಧನಕ್ಕೊಳಗಾಗಿರುವ ಕಾಂಗ್ರೆಸ್ ನಾಯಕ ಪವನ್ ಖೇರಾಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಅರ್ಜಿದಾರರನ್ನು ರಕ್ಷಿಸುವುದಕ್ಕಾಗಿ ಪವನ್ ಖೇರಾಗೆ ಜಾಮೀನು ನೀಡಬೇಕೆಂದು ಸುಪ್ರೀಂ ಕೋರ್ಟ್ ಹೇಳಿದ್ದು, ನ್ಯಾಯವ್ಯಾಪ್ತಿಯ ನ್ಯಾಯಾಲಯದ ಮೂಲಕ ನೀಡುವ ಜಾಮೀನಿನ ಆಧಾರದಲ್ಲಿ ಬಿಡುಗಡೆ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.