ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಗ್ರೇಟರ್ ನೋಯ್ಡಾ: ಇ-ರಿಕ್ಷಾದಲ್ಲಿ ಪಟಾಕಿ ಸ್ಫೋಟ, ಓರ್ವ ಸಾವು, ಮತ್ತೋರ್ವ ಗಂಭೀರ

ನವದೆಹಲಿ: ಗ್ರೇಟರ್ ನೋಯ್ಡಾದ ದಾದ್ರಿಯಲ್ಲಿ ಇ-ರಿಕ್ಷಾದಲ್ಲಿ ಇರಿಸಲಾಗಿದ್ದ ಪಟಾಕಿ ಸ್ಫೋಟಗೊಂಡು ವಾಹನದಲ್ಲಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿ ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ.

ನಿನ್ನೆ ಅಂದರೆ ಸೋಮವಾರ ಜಗನ್ನಾಥ ಯಾತ್ರೆ ಹೊರಡುತ್ತಿದ್ದ ವೇಳೆ ಇ-ರಿಕ್ಷಾದಲ್ಲಿ ಇರಿಸಲಾಗಿದ್ದ ಪಟಾಕಿಯಲ್ಲಿ ಬೆಂಕಿ ಕಾಣಿಸಿಕೊಂಡು ಭಾರೀ ಸ್ಫೋಟ ಸಂಭವಿಸಿದೆ. ಈ ಸ್ಫೋಟದ ನಂತರ, ಸುತ್ತಮುತ್ತಲ ಪ್ರದೇಶ ಮತ್ತು ವಸ್ತುಗಳೂ ಕೂಡ ಸ್ಫೋಟದ ರಭಸಕ್ಕೆ ಚಿಂದಿಯಾಗಿದೆ. ಈ ದುರ್ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಇಬ್ಬರನ್ನೂ ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಈ ಪೈಕಿ ಓರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಇದೀಗ ಈ ಸ್ಫೋಟದ ವಿಡಿಯೋ ಸ್ಥಳೀಯ ಸಿಸಿಟಿವಿ ದಾಖಲಾಗಿದ್ದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪರ ವೈರಲ್ ಆಗಿದೆ.

ಮತ್ತೊಂದು ಘಟನೆಯಲ್ಲಿ ಇದೇ ದಾದ್ರಿ ಪೊಲೀಸ್ ಠಾಣೆ ವ್ಯಾಪ್ತಿಯ ದೌಲತ್ ರಾಮ್ ಕಾಲೋನಿ ಬಳಿ ಇರುವ ವಿದ್ಯುತ್ ಪರಿವರ್ತಕ ಸೋಮವಾರ ಸಂಜೆ ಬಿಸಿಯಾಗಿ ಸ್ಫೋಟಗೊಂಡಿದೆ. ಈ ಘಟನೆಯಲ್ಲಿ ನಾಲ್ವರು ಸುಟ್ಟು ಕರಕಲಾಗಿದ್ದಾರೆ. ಈ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ನೋಯ್ಡಾದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

kiniudupi@rediffmail.com

No Comments

Leave A Comment