Log In
BREAKING NEWS >
ಮಾರ್ಚ್ 22ರ೦ದು ಚ೦ದ್ರಾಮಾನ ಯುಗಾದಿ ,ಏಪ್ರಿಲ್ 15ರ೦ದು ಸೌರಮಾನ ಯುಗಾದಿ ಹಬ್ಬವು ನಡೆಯಲಿದೆ.ಹಲವಾರು ಗಣ್ಯರು ಯುಗಾದಿ ಹಬ್ಬದ ಶುಭಾಶಯವನ್ನು ಕೋರಿರುತ್ತಾರೆ.....ಮಾ.21,22 ಕಾಪು ಸುಗ್ಗಿ ಮಾರಿಪೂಜೆ ದಿನ ನಿಗದಿ....

3ನೇ ಟೆಸ್ಟ್: ಭಾರತಕ್ಕೆ ಮುಳುವಾದ ಕಳಪೆ ಬ್ಯಾಟಿಂಗ್, ಆಸ್ಟ್ರೇಲಿಯಾಗೆ 9 ವಿಕೆಟ್ ಗಳ ಭರ್ಜರಿ ಜಯ

ಇಂದೋರ್: ನಿರೀಕ್ಷೆಯಂತೆಯೇ ಇಂದೋರ್ ನಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ತನ್ನ ಕಳಪೆ ಬ್ಯಾಟಿಂಗ್ ನಿಂದಾಗಿ ಆಸ್ಟ್ರೇಲಿಯಾ ಎದುರು 9 ವಿಕೆಟ್ ಗಳ ಹೀನಾಯ ಸೋಲು ಕಂಡಿದೆ.

2ನೇ ಇನ್ನಿಂಗ್ಸ್ ನಲ್ಲಿ ಆಸ್ಟ್ರೇಲಿಯಾಗೆ ಭಾರತ 76 ರನ್‌ಗಳ ಗುರಿ ನೀಡಿತ್ತು.. ಇಂದು ಬ್ಯಾಟಿಂಗ್ ನಡೆಸಿದ ಆಸ್ಟ್ರೇಲಿಯಾ ತಂಡ 1 ವಿಕೆಟ್ ಕಳೆದುಕೊಂಡು ಗುರಿಯನ್ನು ಸಾಧಿಸಿ 9 ವಿಕೆಟ್ ಗಳ ಅಂತರದಲ್ಲಿ ಗೆಲುವು ಸಾಧಿಸಿತು. ಟ್ರಾವಿಸ್ ಹೆಡ್ 49 ಮತ್ತು ಲಬುಶೆನ್ 28 ರನ್ ಗಳಿಸಿ ಅಜೇಯರಾಗಿ ಉಳಿದರು.

ಇದಕ್ಕೂ ಮುನ್ನ ಭಾರತ ತಂಡ ತನ್ನ ಎರಡನೇ ಇನ್ನಿಂಗ್ಸ್‌ನಲ್ಲಿ ಕೇವಲ 163 ರನ್ ಗಳಿಸಲಷ್ಟೇ ಶಕ್ತವಾಗಿ ಆಸ್ಟ್ರೇಲಿಯಾಕ್ಕೆ 76 ರನ್‌ಗಳ ಟಾರ್ಗೆಟ್ ನೀಡಿತ್ತು. ಆಸ್ಟ್ರೇಲಿಯಾ ಪರ ಆಫ್ ಸ್ಪಿನ್ನರ್ ನಾಥನ್ ಲಿಯಾನ್ 64 ರನ್ ನೀಡಿ 8 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು. ಭಾರತದ ಪರ ಚೇತೇಶ್ವರ ಪೂಜಾರ 59 ರನ್‌ಗಳ ಇನಿಂಗ್ಸ್‌ ಆಡಿದರು. ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ 109 ರನ್ ಗಳಿಸಿತ್ತು, ಇದಕ್ಕೆ ಉತ್ತರವಾಗಿ ಆಸ್ಟ್ರೇಲಿಯಾ 197 ರನ್ ಗಳಿಸಿ 88 ರನ್ ಮುನ್ನಡೆ ಸಾಧಿಸಿತು.

No Comments

Leave A Comment