ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಢಾಕಾದಲ್ಲಿ 7 ಅಂತಸ್ತಿನ ಕಟ್ಟಡದಲ್ಲಿ ಸ್ಫೋಟ 100 ಕ್ಕೂ ಹೆಚ್ಚು ಮಂದಿಗೆ ಗಾಯ 15 ಸಾವು

ಢಾಕ: ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ 7 ಅಂತಸ್ತಿನ ಕಟ್ಟಡದಲ್ಲಿ ಸ್ಫೋಟ ಸಂಭವಿಸಿದ್ದು, 100 ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದ್ದು 15 ಮಂದಿ ಸಾವನ್ನಪ್ಪಿದ್ದಾರೆ.

ಕಚೇರಿ ಒಳಭಾಗದಲ್ಲಿ ಈ ಸ್ಫೋಟ ಸಂಭವಿಸಿದ್ದು,  ಸ್ಫೋಟಕ್ಕೆ ಕಾರಣ ಇನ್ನೂ ತಿಳಿದಿಲ್ಲ. ಆದರೆ ಸ್ಥಳೀಯರ ಪ್ರಕಾರ, ಕಟ್ಟಡದಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ರಾಸಾಯನಿಕಗಳಿಂದಾಗಿ ಈ ಸ್ಫೋಟ ಸಂಭವಿಸಿರಬಹುದು ಎನ್ನಲಾಗುತ್ತಿದೆ. ಈ ಬಹುಮಹಡಿ ಕಟ್ಟಡವನ್ನು ಬಹುತೇಕ ಕಚೇರಿ ಹಾಗೂ ಉದ್ಯಮಗಳಿಗಾಗಿ ಬಳಕೆ ಮಾಡಲಾಗುತ್ತಿತ್ತು.

ಸ್ಫೋಟದ ತೀವ್ರತೆಗೆ ಗುಲಿಸ್ತಾನದಲ್ಲಿನ ಕಟ್ಟಡದ 5-6 ನೇ ಮಹಡಿಯೂ ಅಲುಗಾಡಿದೆ ಎಂದು ತಿಳಿದುಬಂದಿದೆ.

ಈ ಘಟನೆ ನಡೆದಿರುವ ಸ್ಥಳ ಢಾಕಾದ ಸಗಟು ಸರಕುಗಳ ಕೇಂದ್ರವಾಗಿದೆ. ಸ್ಫೋಟದಲ್ಲಿ ಕಟ್ಟಡದ ಗೋಡೆಗಳಿಗೆ ಹಾನಿಯುಂಟಾಗಿದ್ದು, ಗಾಜುಗಳು ಪುಡಿಯಾಗಿರುವುದಷ್ಟೇ ಅಲ್ಲದೇ ರಸ್ತೆಯ ಮತ್ತೊಂದು ಬದಿಯಲ್ಲಿದ್ದ ಬಸ್ ಗೂ ಹಾನಿಯುಂಟಾಗಿದೆ ಎಂದು ವರದಿಗಳ ಮೂಲಕ ತಿಳಿದುಬಂದಿದೆ.

kiniudupi@rediffmail.com

No Comments

Leave A Comment