Log In
BREAKING NEWS >
...........ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆ,ಅಭಿಮಾನಿಗಳಿಗೆ "ಶ್ರೀರಾಮನವಮಿ"ಯ ಶುಭಾಶಯಗಳು.......

ನಾನು ಮನಸ್ಸು ಮಾಡದಿರುತ್ತಿದ್ದರೆ ಮಂಡ್ಯದ ಅಕ್ರಮ ಗಣಿಗಾರಿಕೆ ನಿಲ್ಲುತ್ತಿರಲಿಲ್ಲ, ಮೈ ಶುಗರ್ ಫ್ಯಾಕ್ಟರಿ ಮತ್ತೆ ಆರಂಭವಾಗುತ್ತಿರಲಿಲ್ಲ: ಸುಮಲತಾ ಅಂಬರೀಷ್

ಮಂಡ್ಯ: ಆಕಸ್ಮಿಕವಾಗಿ ನಾನು ರಾಜಕೀಯ ಕ್ಷೇತ್ರ ಪ್ರವೇಶಿಸಿದ್ದು, ಅಂದಿನ ಮೈತ್ರಿ ಸರ್ಕಾರವನ್ನೇ ಎದುರು ಹಾಕಿಕೊಂಡು ಚುನಾವಣೆಯನ್ನು ಮಂಡ್ಯದ ಸ್ವಾಭಿಮಾನ ಜನತೆಯ ಹೆಸರಿನಲ್ಲಿ ಚುನಾವಣೆಯನ್ನು ಎದುರಿಸಿ ಗೆದ್ದೆ. ಈ ವೇಳೆ ಹಲವು ಸವಾಲುಗಳು ಎದುರಾದವು. ನನ್ನನ್ನು ಹೆಜ್ಜೆಹೆಜ್ಜೆಗೂ ಅವಮಾನ ಮಾಡುತ್ತಾ ಹೋದರು ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಭಾವುಕರಾಗಿ ಹೇಳಿದರು.

ಇಂದು ಮಂಡ್ಯದ ತಮ್ಮ ಸಂಸದರ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಸದೆಯಾಗಿ ನಾನು ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಆದರೆ ನನ್ನನ್ನು ಹೆಣ್ಣೆಂದು ಬಿಡಿ, ಸಂಸದೆ ಎಂದು ಕೂಡ ಗೌರವ ತೋರಲಿಲ್ಲ, ಚುಚ್ಚುತ್ತಾ ಹೋದರು, ಏನೂ ಕೆಲಸ ಮಾಡುತ್ತಿಲ್ಲ ಎಂದು ಅಪಪ್ರಚಾರ ಮಾಡಿದರು ಎಂದು ಭಾವುಕರಾಗಿ ಹೇಳಿದರು.

ನಾನು ಸಂಸದೆಯಾಗಿ ಏನೂ ಮಾಡಿಲ್ಲ ಎಂದು ರಾಜಕೀಯವಾಗಿ ಹೇಳಬಹುದು, ಆದರೆ ನಿಜಾಂಶ ಬೇರೆ ಇದೆ, ನಾನು ಸಂಸದೆಯಾಗದಿದ್ದಿದ್ದರೆ ಮೈಶುಗರ್ ಫ್ಯಾಕ್ಟರಿ ಪುನರಾರಂಭವಾಗುತ್ತಿರಲಿಲ್ಲ, ಮಂಡ್ಯ ಸಕ್ಕರೆ ಕಾರ್ಖಾನೆ ಇಂದು ಕೆಲಸ ಮಾಡುತ್ತಿರಲಿಲ್ಲ, ಅಕ್ರಮ ಗಣಿಗಾರಿಕೆ ನಿಲ್ಲುತ್ತಿರಲಿಲ್ಲ ಎಂದರು.

ಅಂಬರೀಷ್ ಅವರು ರಾಜ್ಯ ವಸತಿ ಸಚಿವರಾಗಿದ್ದಾಗ ಬಡವರಿಗೆ ಮನೆ ನಿರ್ಮಿಸಿ ಕೊಡಬೇಕೆಂದು ಆರಂಭಿಸಿದ್ದ ವಸತಿ ಯೋಜನೆಯ ಬಗ್ಗೆ ಮಾತನಾಡಿ ಹಣ ತರಿಸಿ ಇಂದು 625 ಮನೆಗಳು ನಿರ್ಮಾಣವಾಗಿವೆ. ನರೇಗಾ ಯೋಜನೆಯಡಿ ಮಂಡ್ಯ ಜಿಲ್ಲೆ 2ನೇ ಸ್ಥಾನದಲ್ಲಿದೆ ಎಂದರು.

No Comments

Leave A Comment