ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಬಿಜೆಪಿ ಮೇಲೆ ನಿರಾಸೆ, ಕಾಂಗ್ರೆಸ್- ಜೆಡಿಎಸ್ ಹೊಸ ಭರವಸೆ: ಲಿಂಗಾಯತ ಸ್ವಾಮೀಜಿಗಳ ವರಸೆ; ಆತಂಕದಲ್ಲಿ ಕೇಸರಿ ಪಾಳಯ!

ಬೆಂಗಳೂರು: 2018ರಲ್ಲಿ ಬಹುತೇಕ ಲಿಂಗಾಯತ ಮತಗಳನ್ನು ಪಡೆದಿದ್ದ ಬಿಜೆಪಿಗೆ 2023ರ ವಿಧಾನಸಭೆ ಚುನಾವಣೆಯಲ್ಲಿ ಅದೇ ಮ್ಯಾಜಿಕ್ ನಿರೀಕ್ಷಿಸುವಂತಿಲ್ಲ, ಸದ್ಯ ನಡೆಯುತ್ತಿರುವ ಬದಲಾವಣೆ ಕೇಸರಿ ಪಕ್ಷದ ನಾಯಕರನ್ನು ಆತಂಕಕ್ಕೀಡು ಮಾಡಿದೆ.

ಬಿಜೆಪಿ ವಿರುದ್ಧ ಬಹಿರಂಗವಾಗಿ ಕೆಲಸ ಮಾಡುತ್ತಿರುವ ಜಾಗತಿಕ ಲಿಂಗಾಯತ ಚಳುವಳಿ, ಪಂಚಮಸಾಲಿ ಗುಂಪುಗಳು ಮತ್ತು ರಾಷ್ಟ್ರೀಯ ಬಸವ ದಳದ ಸದಸ್ಯರು ಈ ಬದಲಾವಣೆಗೆ ಕಾರಣರಾಗಿದ್ದಾರೆ, ಸಮುದಾಯದ ನಿಲುವನ್ನು ಸ್ಪಷ್ಟಪಡಿಸಿದ ಪಂಚಮಸಾಲಿ ಮಠಾಧೀಶ ಬಸವ ಜಯ ಮೃತ್ಯುಂಜಯ ಸ್ವಾಮೀಜಿ, ನಮ್ಮ ಕೋಪ ಕೇವಲ ಮೀಸಲಾತಿ ವಿಷಯದ ಮೇಲಿದೆ.

ಎರಡು ವರ್ಷ ಕಳೆದರೂ ಬಿಜೆಪಿ ಸರ್ಕಾರ ನಮ್ಮ ಸಮಸ್ಯೆಗೆ ಸ್ಪಂದಿಸಿಲ್ಲ. ನಾವು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ 65 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದು, ನಮ್ಮೊಂದಿಗೆ ಮಾತನಾಡಲು ಸರ್ಕಾರಕ್ಕೆ ಸಮಯವಿಲ್ಲ. ಆದರೆ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಬಂದು ನಮ್ಮನ್ನು ಭೇಟಿ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಪಂಚಮಸಾಲಿಗಳು ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕು ಎಂದು ಒತ್ತಾಯಿಸುತ್ತಿದ್ದಾರೆ. ಬಿಜೆಪಿಗೆ ಈ ಬಾರಿ ಲಿಂಗಾಯತ ಸಮುದಾಯ ಬೆಂಬಲ ನೀಡುವಲ್ಲಿ ದೊಡ್ಡ ತೊಡಕುಗಳಿವೆ ಎಂದು ಲಿಂಗಾಯತ ಚಳವಳಿಗಳೊಂದಿಗೆ ಗುರುತಿಸಿಕೊಂಡಿರುವ ಮಾಜಿ ಅಧಿಕಾರಿ ಎಸ್‌ಎಂ ಜಾಮದಾರ್ ಹೇಳಿದ್ದಾರೆ.

‘ಲಿಂಗಾಯತರು ಸಾಮಾನ್ಯವಾಗಿ ಸಮುದಾಯದ ಪರವಾಗಿ ನಿಲ್ಲುವವರನ್ನು ಬೆಂಬಲಿಸುತ್ತಾರೆ. ಆದರೆ ಈ ಬಾರಿ, ಯಡಿಯೂರಪ್ಪ ಅವರು ಸಿಎಂ ಆಗಿ ನಿರ್ಗಮಿಸಿದ ನಂತರ, ವಿಶೇಷವಾಗಿ ಅವರು ಕಣ್ಣೀರು ಸುರಿಸಿದ ನಂತರ ಅದು ತಣ್ಣಗಾದಂತಿದೆ ಎಂದು ವೀರಶೈವ ಮಹಾಸಭಾ ಕಾರ್ಯದರ್ಶಿ ರೇಣುಕಾ ಪ್ರಸನ್ನ ತಿಳಿಸಿದ್ದಾರೆ.

ನಮ್ಮನ್ನು ವಿರೋಧಿಸುವವರು ಮೂಲತಃ ಕಾಂಗ್ರೆಸ್ ಪರ ಶಕ್ತಿಗಳಾಗಿದ್ದು, ಬಿಜೆಪಿಯಿಂದ ದೂರ ಸರಿಯುತ್ತಿಲ್ಲ. ಲಿಂಗಾಯತರು ಇತರರನ್ನು ನಂಬುವುದಿಲ್ಲವಾದ್ದರಿಂದ ಅವರು ನಮ್ಮನ್ನು ಬೆಂಬಲಿಸುವುದನ್ನು ಮುಂದುವರಿಸುತ್ತಾರೆ ಎಂದು ಬಿಜೆಪಿಯ ಮಾಜಿ ಎಂಎಲ್‌ಸಿ ಗೋ ಮಧುಸೂದನ್ ಅಭಿಪ್ರಾಯ ಪಟ್ಟಿದ್ದಾರೆ.

ಲಿಂಗಾಯತ ಸಮುದಾಯ ಬೆಂಬಲ ಕಡಿಮೆಯಾಗುತ್ತಿರುವುದು ಸಾಮಾಜಿಕ ಮಾಧ್ಯಮದಲ್ಲಿ ಸ್ಪಷ್ಟವಾಗಿ ಕಂಡುಬಂದಿದೆ. ಪಂಚಮಸಾಲಿ ಉಪಪಂಗಡ ಸೇರಿದಂತೆ ಹಲವು ಸ್ವಯಂಸೇವಕರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಅವರ ಮನ ಗೆಲ್ಲದಿದ್ದರೇ ಬಿಜೆಪಿ ಸಂಕಷ್ಟ ಕಟ್ಟಿಟ್ಟ ಬುತ್ತಿ ಎಂದು ರಾಜಕೀಯ ವಿಶ್ಲೇಷಕ ಬಿಎಸ್ ಮೂರ್ತಿ ವಿವರಿಸಿದ್ದಾರೆ.

No Comments

Leave A Comment