Log In
BREAKING NEWS >
ಮಾ.28ರ೦ದು ಸ೦ಜೆ 6.30ಕ್ಕೆ ಪಣಿಯಾಡಿ ಶ್ರೀಅನ೦ತಾಸನ ಶ್ರೀಲಕ್ಷ್ಮೀಪದ್ಮನಾಭ ದೇವಸ್ಥಾನದ ವಠಾರದಲ್ಲಿ ಶ್ರೀಏಕದ೦ತ ಸೇವಾ ಸಮಿತಿ ಪಣಿಯಾಡಿ ಉದ್ಘಾಟನಾ ಸಮಾರ೦ಭ ಜರಗಲಿದೆ....

ಮಂಗಳೂರು: ಹೋಳಿ ಸಂಭ್ರಮದ ಡಿಜೆ ಪಾರ್ಟಿಗೆ ಭಜರಂಗದಳ ಕಾರ್ಯಕರ್ತರ ದಾಳಿ

ಮಂಗಳೂರು:ಮಾ 26. ನಗರದ ಮರೋಳಿ ಎಂಬಲ್ಲಿ ‘ರಂಗ್ ದೇ ಬರ್ಸಾ’ ಹೆಸರಿನಲ್ಲಿ ನಡೆಯುತ್ತಿದ್ದ ಹೋಳಿ ಸಂಭ್ರಮದ ಡಿಜೆ ಪಾರ್ಟಿಗೆ ಭಜರಂಗದಳ ಕಾರ್ಯಕರ್ತರು ದಾಳಿ ನಡೆಸಿರುವ ಘಟನೆ ನಡೆದಿದೆ.

ಡಿಜೆ ಪಾರ್ಟಿ ಜೊತೆಗೆ ಬಣ್ಣ ಎರಚಿ ಯುವಕ-ಯುವತಿಯರು ಸಂಭ್ರಮಿಸುತ್ತಿದ್ದು, ಅನ್ಯಕೋಮಿನ ಯುವಕರ ಜೊತೆ ಹೋಳಿ ಆಚರಣೆ ಎಂದು ಆರೋಪಿಸಿ ಭಜರಂಗದಳ ದಾಳಿ ನಡೆಸಿ ಬ್ಯಾನರ್ ಹರಿದು ಹಾಕಿ ವಸ್ತುಗಳನ್ನು ಪುಡಿಗೈದಿದ್ದಾರೆ.

ಈ ವೇಳೆ ಭಜರಂಗದಳ ಕಾರ್ಯಕರ್ತರು ಮತ್ತು ಆಯೋಜಕರ ಮಧ್ಯೆ ಮಾತಿನ ಚಕಮಕಿ ನಡೆದಿದ್ದು, ಭಜರಂಗದಳದ ಕಾರ್ಯಕರ್ತರು ಆಯೋಜಕರು ಮತ್ತು ಕೆಲವರ ಮೇಲೆ ಹಲ್ಲೆಗೂ ಯತ್ನಿಸಿರುವುದಾಗಿ ವರದಿಯಾಗಿದೆ.

ಇನ್ನು ಪೊಲೀಸರು ಮಧ್ಯ ಪ್ರವೇಶಿಸಿ ಭಜರಂಗದಳ ಕಾರ್ಯಕರ್ತರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

No Comments

Leave A Comment