ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಮೆಕ್ಸಿಕೋ ವಲಸಿಗರ ಕೇಂದ್ರದಲ್ಲಿ ಭಾರೀ ಬೆಂಕಿ ದುರಂತ: 37 ಸಾವು, 100ಕ್ಕೂ ಹೆಚ್ಚು ಮಂದಿಗೆ ಗಾಯ!

ಮೆಕ್ಸಿಕೋ: ಅಮೆರಿಕಾ ಮತ್ತು ಮೆಕ್ಸಿಕನ್ ಗಡಿಯಲ್ಲಿರುವ ಸಿಯುಡಾಡ್ ಜುವಾರೆಜ್‌ನ ವಲಸಿಗರ ಕೇಂದ್ರದಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದ್ದು ಇದರಲ್ಲಿ ಕನಿಷ್ಠ 37 ಮಂದಿ ಸಾವನ್ನಪ್ಪಿದ್ದು ಸುಮಾರು 100 ಮಂದಿ ಗಾಯಗೊಂಡರು.

ಮೆಕ್ಸಿಕೊ ಮತ್ತು ಅಮೆರಿಕಾವನ್ನು ಸಂಪರ್ಕಿಸುವ ಸ್ಟಾಂಟನ್-ಲೆಡ್ರೆ ಸೇತುವೆಯ ಬಳಿ ಇರುವ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಫಾರ್ ಮೈಗ್ರೇಷನ್ (INM) ಕಚೇರಿಯಲ್ಲಿ ಬೆಂಕಿ ಕಾಣಿಸಿಕೊಂಡು ಈ ದುರಂತ ಸಂಭವಿಸಿದೆ.

ಕಳೆದ ತಡರಾತ್ರಿ ಸುಮಾರು 71 ವಲಸಿಗರನ್ನು ಕೇಂದ್ರಕ್ಕೆ ಕರೆತಂದ ಸ್ವಲ್ಪ ಸಮಯದ ಬಳಿಕ ಈ ಘಟನೆ ಸಂಭವಿಸಿದೆ. ಬೆಂಕಿಗೆ ಕಾರಣ ಅಥವಾ ಮೃತರ ರಾಷ್ಟ್ರೀಯತೆ ಇನ್ನೂ ತಿಳಿದುಬಂದಿಲ್ಲ.

ಎಲ್ ಪಾಸೊ ಟೆಕ್ಸಾಸ್‌ನಿಂದ ರಿಯೊ ಗ್ರಾಂಡೆ ನದಿಗೆ ಅಡ್ಡಲಾಗಿರುವ ಮೆಕ್ಸಿಕನ್ ನಗರವಾದ ಸಿಯುಡಾಡ್ ಜುರೆಜ್ ಇತ್ತೀಚಿನ ವಾರಗಳಲ್ಲಿ ಜನರ ಒಳಹರಿವನ್ನು ಕಂಡಿದೆ ಎಂದು ಬಿಬಿಸಿ ವರದಿ ಮಾಡಿದೆ.

kiniudupi@rediffmail.com

No Comments

Leave A Comment