![](https://i0.wp.com/karavalikirana.com/kan/wp-content/uploads/2023/03/Untitled-7-2.jpg?fit=478%2C320&ssl=1)
ರಾಹುಲ್ ಗಾಂಧಿ ಅನರ್ಹತೆ: ಕೆಂಪು ಕೋಟೆಯಿಂದ ಕಾಂಗ್ರೆಸ್ ನಿಂದ ಪಂಜಿನ ಮೆರವಣಿಗೆ
ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿರುವುದನ್ನು ವಿರೋಧಿಸಿ ಕಾಂಗ್ರೆಸ್ ಮಂಗಳವಾರ ಹಳೆ ದೆಹಲಿಯ ಚಾಂದಿನಿ ಚೌಕ್ನಲ್ಲಿರುವ ಕೆಂಪು ಕೋಟೆಯಿಂದ ಟೌನ್ ಹಾಲ್ ವರೆಗೆ ಪಂಜಿನ ಪ್ರತಿಭಟನಾ ಮೆರವಣಿಗೆ ನಡೆಸಲು ನಿರ್ಧರಿಸಿದೆ.
ಇಂದು ಸಂಜೆ 7 ಗಂಟೆಗೆ ಕೆಂಪುಕೋಟೆಯಿಂದ ಆರಂಭವಾಗುವ ಲೋಕತಂತ್ರ ಬಚಾವೋ ಪಂಜಿನ ಮೆರವಣಿಗೆಯಲ್ಲಿ ಕಾಂಗ್ರೆಸ್ ಸಂಸದರು ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮೆರವಣಿಗೆಯಲ್ಲಿ ಪಕ್ಷದ ಸಂಸದರು ಕೈಯಲ್ಲಿ ಉರಿಯುವ ಪಂಜು ಹಿಡಿದು ಸಾಗಲಿದ್ದಾರೆ ಎಂದು ಅವರು ಹೇಳಿದ್ದಾರೆ.