Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಮಂಗಳೂರು: ಲಾಡ್ಜ್‌‌ವೊಂದರಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

ಮಂಗಳೂರು:ಮಾ 31.ಮಂಗಳೂರು ನಗರದ ಕೆ ಎಸ್ ರಾವ್ ರಸ್ತೆಯಲ್ಲಿನ ಲಾಡ್ಜ್‌‌ವೊಂದರಲ್ಲಿ ಒಂದೇ ಕುಟುಂಬದ ನಾಲ್ವರು ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಮೃತರನ್ನು ದೇವೇಂದ್ರ (46) ಅವರ ಪತ್ನಿ ಮತ್ತು 2 ಮಕ್ಕಳು ಎಂದು ಗುರುತಿಸಲಾಗಿದೆ.

ಆತ್ಮಹತ್ಯೆ ಮಾಡಿಕೊಂಡವರು ಮೈಸೂರಿನ ವಾಣಿ ವಿಲಾಸದವರೆಂದು ತಿಳಿದು ಬಂದಿದ್ದು, ಪಕ್ಕದಲ್ಲೇ ಡೆತ್ ನೋಟು ಕೂಡ ಪತ್ತೆಯಾಗಿದೆ ಎನ್ನಲಾಗಿದೆ.

ಇನ್ನು ನಾಲ್ವರ ಪೈಕಿ ಓರ್ವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ್ರೆ ಉಳಿದ ಮೂವರು ಮಲಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಬಂದರು ಪೊಲೀಸರು ಧಾವಿಸಿದ್ದು ಪರಿಶೀಲನೆ ನಡೆಸಿ ತನಿಖೆ ಆರಂಭಿಸಿದ್ದಾರೆ.

No Comments

Leave A Comment