ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಶ್ರೀ ಕ್ಷೇತ್ರ ಧರ್ಮಸ್ಥಳ:ಡಾ | ಡಿ . ವೀರೇಂದ್ರ ಹೆಗ್ಗಡೆ ಅವರಿಗೆ ಕೋಟಿ ಗೀತಾ ಲೇಖನ ಯಜ್ಞ ದ ಪುಸ್ತಕ ಹಸ್ತಾ೦ತರ

ಶ್ರೀ ಕ್ಷೇತ್ರ ಧರ್ಮಸ್ಥಳ:ಡಾ | ಡಿ . ವೀರೇಂದ್ರ ಹೆಗ್ಗಡೆ ಅವರಿಗೆ ಕೋಟಿ ಗೀತಾ ಲೇಖನ ಯಜ್ಞ ದ ಪುಸ್ತಕ ಹಸ್ತಾ೦ತರಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪದ್ಮವಿಭೂಷಣ ರಾಜರ್ಷಿ ಡಾ | ಡಿ . ವೀರೇಂದ್ರ ಹೆಗ್ಗಡೆ ಅವರಿಗೆ ಕೋಟಿ ಗೀತಾ ಲೇಖನ ಯಜ್ಞ ದ ಪುಸ್ತಕಗಳನ್ನು ನೀಡಿ ಮಾರ್ಗದರ್ಶನ ಕೋರಲಾಯಿತು . ರಾಜ್ಯ ಸಭಾ ಸದಸ್ಯರು ಆಗಿರುವ ಖಾವಂದರು ಶ್ರೀ ಪುತ್ತಿಗೆ ಶ್ರೀ ಪಾದರ ಈ ಜಾಗತಿಕ ಧಾರ್ಮಿಕ ಸಂಕಲ್ಪಕ್ಕೆ ಅಪಾರ ಮೆಚ್ಚುಗೆ ವ್ಯಕ್ತಪಡಿಸಿದರು. ಕ್ಷೇತ್ರದ ವತಿಯಿಂದ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು.

ಶ್ರೀ ಪುತ್ತಿಗೆ ಮಠದ ದಿವಾನ ನಾಗರಾಜ ಆಚಾರ್ , ವಾದಿರಾಜ ಸಂಶೋಧನಾ ಕೇಂದ್ರದ ನಿರ್ದೇಶಕ ಡಾ. ಬಿ. ಗೋಪಾಲ ಆಚಾರ್ಯ, ಸಂಕರ್ಷಣ ಪ್ರಖಂಡದ ಗೀತಾ ಪ್ರಚಾರಕ ಕೆ. ವಿ. ರಮಣ ಆಚಾರ್ಯ, ಅಂತರ್ಯಾಮಿಯ
ನಂದನ್ ದಳವಾಯಿ ಉಪಸ್ಥಿತರಿದ್ದರು.

 

kiniudupi@rediffmail.com

No Comments

Leave A Comment