ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಕೇರಳ: ರೈಲಿನಲ್ಲಿ ಸಹ ಪ್ರಯಾಣಿಕನಿಗೆ ಬೆಂಕಿ ಹಚ್ಚಿದ ವ್ಯಕ್ತಿ, ಮೂವರು ಸಾವು, ಎಂಟು ಮಂದಿಗೆ ಗಾಯ

ಕೋಯಿಕ್ಕೋಡ್: ಎಕ್ಸ್‌ಪ್ರೆಸ್‌ ರೈಲಿನಲ್ಲಿ ವ್ಯಕ್ತಿಯೊಬ್ಬ ಜಗಳದ ನಂತರ ಸಹ-ಪ್ರಯಾಣಿಕನಿಗೆ ಬೆಂಕಿ ಹಚ್ಚಿದ ಮತ್ತು ಎಂಟು ಮಂದಿ ಗಾಯಗೊಂಡ ಗಂಟೆಗಳ ನಂತರ ಕೋಯಿಕ್ಕೋಡ್‌ನ ಎಲತ್ತೂರ್ ರೈಲು ನಿಲ್ದಾಣದ ಬಳಿ ಹಳಿಯಲ್ಲಿ ಮಹಿಳೆ ಮತ್ತು ಒಂದು ವರ್ಷದ ಮಗುವಿನ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಯಾಣಿಕರು ತುರ್ತು ಸರಪಳಿಯನ್ನು ಎಳೆದ ನಂತರ ಆಲಪ್ಪುಳ-ಕಣ್ಣೂರು ಎಕ್ಸಿಕ್ಯೂಟಿವ್ ಎಕ್ಸ್‌ಪ್ರೆಸ್ ನಿಧಾನವಾದಾಗ, ಆರೋಪಿ ಪರಾರಿಯಾಗಿದ್ದಾನೆ ಎಂದು ಶಂಕಿಸಲಾಗಿದೆ ಎಂದು ಅವರು ಹೇಳಿದರು.

ಮೂಲಗಳ ಪ್ರಕಾರ, ರಾತ್ರಿ 9.45 ರ ಸುಮಾರಿಗೆ ರೈಲು ಕೋಯಿಕ್ಕೋಡ್ ನಗರವನ್ನು ದಾಟಿ ಕೊರಪುಳ ರೈಲ್ವೆ ಸೇತುವೆಯನ್ನು ತಲುಪಿದಾಗ ಈ ಘಟನೆ ಸಂಭವಿಸಿದೆ. ರೈಲ್ವೆ ರಕ್ಷಣಾ ಪಡೆಗೆ (ಆರ್‌ಪಿಎಫ್) ಮಾಹಿತಿ ನೀಡಿದ ಪ್ರಯಾಣಿಕರು ಬೆಂಕಿಯನ್ನು ನಂದಿಸಿದ್ದಾರೆ.

ಪ್ರಾಥಮಿಕ ಮಾಹಿತಿಯಂತೆ ಬೆಂಕಿ ಹಚ್ಚಿದ ವ್ಯಕ್ತಿ ಘಟನೆ ಬಳಿಕ ಪರಾರಿಯಾಗಿದ್ದಾನೆ. ಸುಟ್ಟಗಾಯಗಳಾಗಿರುವ ಮೂವರನ್ನು ಆರ್‌ಪಿಎಫ್ ಆಸ್ಪತ್ರೆಗೆ ರವಾನಿಸಲಾಗಿದೆ ಮತ್ತು ಅಗತ್ಯ ತಪಾಸಣೆಯ ನಂತರ ರೈಲು ತನ್ನ ಪ್ರಯಾಣವನ್ನು ಮುಂದುವರೆಸಿದೆ ಎಂದು ರೈಲ್ವೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಾಥಮಿಕ ವರದಿಗಳ ಪ್ರಕಾರ, ಇಬ್ಬರ ನಡುವೆ ಶಂಕಿತ ವಾಗ್ವಾದದ ನಂತರ ಘಟನೆ ನಡೆದಿದೆ. ಕೋಯಿಕ್ಕೋಡ್ ನಗರ ಪೊಲೀಸರು ಮತ್ತು ರೈಲ್ವೆ ರಕ್ಷಣಾ ಪಡೆ ಈ ಬಗ್ಗೆ ತನಿಖೆ ಆರಂಭಿಸಿದೆ.

kiniudupi@rediffmail.com

No Comments

Leave A Comment