ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

‘ನನ್ನ ಹೆಂಡತಿ ರಾಜಕೀಯಕ್ಕೆ ಬಂದಿದ್ದು ಪಕ್ಷ ಉಳಿಸಲಿಕ್ಕೆ’ – ಹೆಚ್. ಡಿ ಕುಮಾರಸ್ವಾಮಿ

ಬೆಂಗಳೂರು: ಏ 04. ಅನಿತಾ ಕುಮಾರಸ್ವಾಮಿ ಅವರು ರಾಜಕೀಯಕ್ಕೆ ಬಂದಿದ್ದು ಪಕ್ಷ ಉಳಿಸಲಿಕ್ಕೆ. ಪಕ್ಷದ ಅಭ್ಯರ್ಥಿ ಇಲ್ಲದಿದ್ದಾಗ ಪಕ್ಷದ ಗೌರವ ಉಳಿಸಲು ಅವರನ್ನು ಕರೆದುಕೊಂಡು ಬಂದು ನಿಲ್ಲಿಸಿದೆವು, ನಾವೇ ಅವರನ್ನು ರಾಜಕೀಯವಾಗಿ ದುರುಪಯೋಗಪಡಿಸಿಕೊಂಡಿದ್ದೇವೆ ಹೊರತು ಅವರಿಗೆ ಸ್ವಂತ ಆಸಕ್ತಿಯಿರಲಿಲ್ಲ ಎಂದು ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಭವಾನಿಗೆ ಟಿಕೆಟ್ ಕೊಡುವುದಾದರೆ ನನಗೆ ಕೂಡ ನೀಡಬೇಕೆಂದು ಅನಿತಾ ಕುಮಾರಸ್ವಾಮಿ ಪಟ್ಟು ಹಿಡಿದಿದ್ದಾರೆ ಎಂದು ವರದಿಗಳು ಬರುತ್ತಿದ್ದು, ಇದಕ್ಕೆ ಪ್ರತಿಕ್ರಿಯಿಸಿದ ಎಚ್‌‌ಡಿಕೆ, ನಮ್ಮ ಕುಟುಂಬದಲ್ಲಿ ಅನಿತಾ ಕುಮಾರಸ್ವಾಮಿಯವರನ್ನು ಎರಡು ಮೂರು ಬಾರಿ ಪಕ್ಷದ ಅಭ್ಯರ್ಥಿ ಇಲ್ಲದೇ ಇದ್ದಾಗ ನಿಲ್ಲಿಸಲಾಗಿತ್ತಷ್ಟೆ ಹೊರತು ಅವರಿಗೆ ಆಸಕ್ತಿಯಿರಲಿಲ್ಲ. ಕಾರ್ಯಕರ್ತರು ಮತ್ತು ದೇವೇಗೌಡರ ಸೂಚನೆ ಒತ್ತಡ ಮೇರೆಗೆ ಅನಿತಾ ಚುನಾವಣೆಗೆ ನಿಂತು ಗೆದ್ದರು. ಇನ್ನು ಮುಂದೆ ಅಭ್ಯರ್ಥಿಯಾಗಲು ಅವರಿಗೆ ಒಲವು ಇಲ್ಲ. ಚುನಾವಣಾ ರಾಜಕೀಯದಿಂದ ದೂರವುಳಿದಿದ್ದಾರೆ ಎಂದರು.

ಇನ್ನು ಹಾಸನ ಜಿಲ್ಲೆ ರಾಜಕಾರಣ ಬೇರೆ, ನನ್ನ ಹೆಂಡತಿ ರಾಜಕಾರಣ ಬೇರೆ, ಸೊಸೆಯಂದಿರ ಮಧ್ಯೆ ಹೊಡೆದಾಟ ಇಲ್ಲ, ನನ್ನ ಹೆಂಡತಿ ರಾಜಕೀಯಕ್ಕೆ ಬಂದಿದ್ದು ಪಕ್ಷ ಉಳಿಸಲಿಕ್ಕೆ. ಹಾಗಾಗಿ ಆ ಕೆಟಗರಿಕೆ ಇಲ್ಲಿಯದನ್ನು ಸೇರಿಸಬೇಕಾಗಿಲ್ಲ. ನನ್ನ ಕುಟುಂಬವನ್ನು ಅನಿತಾ ಕುಮಾರಸ್ವಾಮಿಯನ್ನು ಮಧ್ಯೆ ತರಬೇಡಿ, ಅವರು ಗೌರವಯುತವಾಗಿ ಕುಟುಂಬದ ಮರ್ಯಾದೆ ಉಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

kiniudupi@rediffmail.com

No Comments

Leave A Comment