ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಐಪಿಎಲ್ 2023: RCB ತಂಡದಲ್ಲಿ 2 ಮಹತ್ತರ ಬದಲಾವಣೆ, ವೇಯ್ನ್ ಪಾರ್ನೆಲ್, ವಿಶಾಖ್ ವಿಜಯ್ ಕುಮಾರ್ ತಂಡ ಸೇರ್ಪಡೆ

ಬೆಂಗಳೂರು: ಹಾಲಿ ಐಪಿಎಲ್ ಟೂರ್ನಿಯಲ್ಲಿ ಗಾಯಾಳುಗಳ ಗಾಯದ ಸಮಸ್ಯೆ ಮುಂದುವರೆದಿರುವಂತೆಯೇ ಇತ್ತ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಇಬ್ಬರು ಆಟಗಾರರು ಕೂಡ ಗಾಯದಿಂದ ಹೊರಗುಳಿದಿದ್ದು, ಅವರ ಬದಲಿಗೆ ಇಬ್ಬರು ಆಟಗಾರರು ತಂಡ ಸೇರ್ಪಡೆಯಾಗಿದ್ದಾರೆ.

ಗಾಯಗೊಂಡಿರುವ ರೀಸ್ ಟಾಪ್ಲಿ ಮತ್ತು ರಜತ್ ಪಾಟಿದಾರ್ ಅವರ ಬದಲಿಗೆ ದಕ್ಷಿಣ ಆಫ್ರಿಕಾದ ವೇಯ್ನ್ ಪಾರ್ನೆಲ್ ಮತ್ತು ಕರ್ನಾಟಕದ ವೈಶಾಕ್ ವಿಜಯ್ ಕುಮಾರ್ ಅವರನ್ನು ಇಂಡಿಯನ್ ಪ್ರೀಮಿಯರ್ ಲೀಗ್‌(ಐಪಿಎಲ್) ಸರಣಿಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಮುಂಬೈ ಇಂಡಿಯನ್ಸ್ ವಿರುದ್ಧದ ಮೊದಲ ಪಂದ್ಯದಲ್ಲಿ ಫೀಲ್ಡಿಂಗ್‌ ಸಂದರ್ಭ ಟಾಪ್ಲಿ ಗಾಯಗೊಂಡಿದ್ದರು.

ಪಾಟಿದಾರ್ ಬದಲಿಗೆ ಕರ್ನಾಟಕ ವೈಶಾಕ್ ವಿಜಯ್ ಕುಮಾರ್ ತಂಡದಲ್ಲಿ ಸ್ಥಾನ ಪಡೆದಿದ್ದು, ದೇಶೀಯ ಕ್ರಿಕೆಟ್‌ನಲ್ಲಿ 14 ಟಿ–20 ಪಂದ್ಯಗಳನ್ನು ಆಡಿದ್ದು, 22 ವಿಕೆಟ್ ಪಡೆದಿದ್ದಾರೆ. ವೈಶಾಕ್ ಅವರಿಗೆ ಆರ್‌ಸಿಬಿ 20 ಲಕ್ಷ ರೂ ಕೊಟ್ಟಿದೆ. ಪ್ರಸ್ತುತ ಐಪಿಎಲ್ ಸರಣಿಯಲ್ಲಿ ಆರ್‌ಸಿಬಿ ಎರಡು ಪಂದ್ಯಗಳನ್ನು ಆಡಿದೆ. ಮುಂಬೈ ಇಂಡಿಯನ್ಸ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ತಂಡ, ಕೋಲ್ಕತ್ತ ವಿರುದ್ಧ ಹೀನಾಯ ಸೋಲುಂಡಿದೆ.

kiniudupi@rediffmail.com

No Comments

Leave A Comment