ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಉತ್ತರ ಪ್ರದೇಶ: ನಾಪತ್ತೆಯಾಗಿದ್ದ ಎರಡು ವರ್ಷದ ಬಾಲಕಿ ನೆರೆಮನೆಯ ಬ್ಯಾಗಿನಲ್ಲಿ ಶವವಾಗಿ ಪತ್ತೆ

ನೋಯ್ಡಾ: ನಾಪತ್ತೆಯಾಗಿದ್ದ ಎರಡು ವರ್ಷದ ಬಾಲಕಿಯ ಶವವು ಗ್ರೇಟರ್ ನೋಯ್ಡಾದ ನೆರೆಮನೆಯ ಬ್ಯಾಗಿನಲ್ಲಿ ಪತ್ತೆಯಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಮಗುವನ್ನು ಕೊಚ್ಚಿ ಕೊಲೆಗೈದಿರುವ ಶಂಕೆ ವ್ಯಕ್ತವಾಗಿದ್ದು, ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಸಂತ್ರಸ್ತೆಯ ಕುಟುಂಬವು ಬಾಡಿಗೆದಾರರಾಗಿ ಅದೇ ಕಟ್ಟಡದಲ್ಲಿ ವಾಸಿಸುತ್ತಿದ್ದರು ಎಂದು ಅವರು ಹೇಳಿದರು.

ಪೊಲೀಸರ ಪ್ರಕಾರ, ಏಪ್ರಿಲ್ 7 ರಂದು ಸೂರಜ್‌ಪುರ ಪೊಲೀಸ್ ಠಾಣಾ ವ್ಯಾಪ್ತಿಯ ದೇವ್ಲಾ ಗ್ರಾಮದ ಬಾಡಿಗೆ ಮನೆಯಿಂದ ಬಾಲಕಿ ನಾಪತ್ತೆಯಾಗಿದ್ದು, ಅದಾದ ಎರಡು ದಿನಗಳ ನಂತರ ಶವ ಪತ್ತೆಯಾಗಿದೆ.

ಅವರು ತಮ್ಮ ಮಗಳು ಕಾಣೆಯಾಗಿರುವ ಬಗ್ಗೆ ಸೂರಜ್‌ಪುರ ಪೊಲೀಸ್ ಠಾಣೆಗೆ ಏಪ್ರಿಲ್ 8 ರಂದು ಹುಡುಗಿಯ ತಂದೆ ದೂರು ನೀಡಿದ್ದಾರೆ ಎಂದು ಹೆಚ್ಚುವರಿ ಡಿಸಿಪಿ (ಸೆಂಟ್ರಲ್ ನೋಯ್ಡಾ) ರಾಜೀವ್ ದೀಕ್ಷಿತ್ ತಿಳಿಸಿದ್ದಾರೆ.

ದೂರಿನ ಆಧಾರದ ಮೇಲೆ ಐಪಿಸಿ ಸೆಕ್ಷನ್ 363ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಮತ್ತು ಆಕೆಯ ಪತ್ತೆಗೆ ಮೂರು ತಂಡಗಳನ್ನು ರಚಿಸಲಾಗಿದೆ.

ಭಾನುವಾರ ಅದೇ ಕಟ್ಟಡದ ಮನೆಯೊಂದರಿಂದ ದುರ್ವಾಸನೆ ಬರುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿತ್ತು. ಪೊಲೀಸರು ಮತ್ತು ಫೋರೆನ್ಸಿಕ್ ತಂಡಗಳು ಅಲ್ಲಿಗೆ ತಲುಪಿದಾಗ ಮಗುವಿನ ಮೃತದೇಹವು ಬ್ಯಾಗಿನಲ್ಲಿ ಪತ್ತೆಯಾಗಿದೆ ಎಂದು ದೀಕ್ಷಿತ್ ಹೇಳಿದರು.
ಬಾಲಕಿಯ ಮೃತದೇಹ ಪತ್ತೆಯಾದ ಮನೆಯಲ್ಲಿ ವಾಸವಾಗಿದ್ದ ವ್ಯಕ್ತಿ ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯವನಾಗಿದ್ದು, ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಎಸಿಪಿ (ಸೆಂಟ್ರಲ್ ನೋಯ್ಡಾ- 3) ಸುಮಿತ್ ಶುಕ್ಲಾ ಮಾತನಾಡಿ, ಸೋಮವಾರ ಲಭ್ಯವಾಗಿರುವ ಮಗುವಿನ ಮರಣೋತ್ತರ ಪರೀಕ್ಷೆಯು ಆಕೆಯನ್ನು ಉಸಿರುಗಟ್ಟಿ ಸಾಯಿಸಲಾಗಿದೆ ಎಂದು ತಿಳಿದುಬಂದಿದೆ. ಶಂಕಿತ ಮತ್ತು ಬಾಲಕಿಯ ತಂದೆ ಇಬ್ಬರೂ ದಿನಗೂಲಿ ಕೆಲಸಗಾರರು ಎಂದು ತಿಳಿಸಿದೆ ಎಂದು ಅವರು ಹೇಳಿದರು.

kiniudupi@rediffmail.com

No Comments

Leave A Comment