Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಬೆಳಗಾವಿ: ಘಟಪ್ರಭಾ ನದಿಗೆ ಈಜಲು ಹೋಗಿದ್ದ ನಾಲ್ವರು ಯುವಕರು ನೀರುಪಾಲು!

ಬೆಳಗಾವಿ: ಘಟಪ್ರಭಾ ನದಿಗೆ ಈಜಲು ಹೋಗಿದ್ದ ನಾಲ್ವರು ಯುವಕರು ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಗೋಕಾಕ್ ತಾಲೂಕಿನ ಧೂಪದಾಳ ಪಟ್ಟಣದ ಪ್ರವಾಸಿ ಮಂದಿರದ ಬಳಿ ಈ ಘಟನೆ ನಡೆದಿದೆ.

ಇಂದು ಮಧ್ಯಾಹ್ನ ಈಜಾಡಲೆಂದು ಆರು ಯುವಕರ ತಂಡ ನದಿಗೆ ಹೋಗಿತ್ತು. ಈ ವೇಳೆ ನದಿಯಲ್ಲಿ ಮುಳುಗಿ ನಾಲ್ವರು ಯುವಕರು ಸಾವನ್ನಪ್ಪಿದ್ದಾರೆ.

ಮೃತರು ಘಟಪ್ರಭಾದ ಬಾರ್ ಒಂದರಲ್ಲಿ ಕೆಲಸ ಮಾಡುತ್ತಿದ್ದು ಎನ್ನಲಾಗಿದೆ. ಘಟಪ್ರಭಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

No Comments

Leave A Comment