ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಚತ್ತಿಸ್ ಗಢದ ದಾಂತೇವಾಡದಲ್ಲಿ ನಕ್ಸಲ್ ಅಟ್ಟಹಾಸ: 10 ಪೊಲೀಸ್ ಸಿಬ್ಬಂದಿ, ಚಾಲಕನ ಹತ್ಯೆ

ನವದೆಹಲಿ: ಚತ್ತೀಸ್ ಗಢದಲ್ಲಿ ನಕ್ಸಲರು ನಡೆಸಿದ ಬಾಂಬ್ ಸ್ಫೋಟದಲ್ಲಿ 10 ಮಂದಿ ಪೊಲೀಸ್ ಸಿಬ್ಬಂದಿಗಳು, ಓರ್ವ ಚಾಲಕ ಮೃತಪಟ್ಟಿರುವ ಘಟನೆ ಏ.26 ರಂದು ವರದಿಯಾಗಿದೆ.

ಅರನ್ಪುರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ವರದಿಯಾಗಿದ್ದು,   ಪೊಲೀಸ್ ಜಿಲ್ಲಾ ರಿಸರ್ವ್ ಗಾರ್ಡ್ (ಡಿಆರ್ ಜಿ) ಗಳ ತಂಡ ನಕ್ಸಲ್ ವಿರೋಧಿ ಕಾರ್ಯಾಚರಣೆ ಮುಕ್ತಾಯಗೊಳಿಸಿ ವಾಪಸ್ಸಾಗುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

kiniudupi@rediffmail.com

No Comments

Leave A Comment