Log In
BREAKING NEWS >
ಉಡುಪಿ ಜಿಲ್ಲೆಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಪರಮೇಶ್ವರ್ ಅನಂತ್ ಹೆಗ್ಡೆ ನೇಮಕ...

ಜಗದೀಶ್ ಶೆಟ್ಟರ್ 100ಕ್ಕೆ 100 ಗೆಲ್ತಾರೆ, ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ: ರಕ್ತದಲ್ಲೇ ಪತ್ರ ಬರೆದ ಅಭಿಮಾನಿ!

ಹುಬ್ಬಳ್ಳಿ: ಈ ಬಾರಿ ವಿಧಾನಸಭೆ ಚುನಾವಣಾ ಕಣದಲ್ಲಿ ರಕ್ತ ರಾಜಕೀಯ ಭಾರೀ ಸದ್ದು ಮಾಡುತ್ತಿದ್ದು, ಇತ್ತೀಚೆಗೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ರಕ್ತದಲ್ಲಿ ಬರೆದುಕೊಡುವುದಾಗಿ ಹೇಳಿದ್ದರು.

ರಾಜಕೀಯ ನಾಯಕರು ಕೇವಲ ಹೇಳಿಕೆ ನೀಡಿದ್ದರು. ಆದರೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ಅಭಿಮಾನಿಯೊಬ್ಬ ರಕ್ತದಲ್ಲಿ ಬರೆದು ಕೊಟ್ಟಿದ್ದಾರೆ. ಜಗದೀಶ್ ಶೆಟ್ಟರ್ 100ಕ್ಕೆ 100 ಗೆಲ್ತಾರೆ ಎಂದು ರಕ್ತದಲ್ಲಿ ಪತ್ರ ಬರೆಯುವ ಮೂಲಕ ಧಾರವಾಡ ಸೆಂಟ್ರಲ್ ನಲ್ಲಿ ಜಗದೀಶ್ ಶೆಟ್ಟರ್ ಗೆಲ್ಲೋದಿಲ್ಲ ಎಂದಿದ್ದ ಯಡಿಯೂರಪ್ಪ ಅವರಿಗೆ ತಿರುಗೇಟು ನೀಡಿದ್ದಾರೆ.

ಜಗದೀಶ್ ಶೆಟ್ಟರ್ ಅಭಿಮಾನಿ ಬರೆದಿರುವ ಈ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

No Comments

Leave A Comment