Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಜಗದೀಶ್ ಶೆಟ್ಟರ್ 100ಕ್ಕೆ 100 ಗೆಲ್ತಾರೆ, ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ: ರಕ್ತದಲ್ಲೇ ಪತ್ರ ಬರೆದ ಅಭಿಮಾನಿ!

ಹುಬ್ಬಳ್ಳಿ: ಈ ಬಾರಿ ವಿಧಾನಸಭೆ ಚುನಾವಣಾ ಕಣದಲ್ಲಿ ರಕ್ತ ರಾಜಕೀಯ ಭಾರೀ ಸದ್ದು ಮಾಡುತ್ತಿದ್ದು, ಇತ್ತೀಚೆಗೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ರಕ್ತದಲ್ಲಿ ಬರೆದುಕೊಡುವುದಾಗಿ ಹೇಳಿದ್ದರು.

ರಾಜಕೀಯ ನಾಯಕರು ಕೇವಲ ಹೇಳಿಕೆ ನೀಡಿದ್ದರು. ಆದರೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ಅಭಿಮಾನಿಯೊಬ್ಬ ರಕ್ತದಲ್ಲಿ ಬರೆದು ಕೊಟ್ಟಿದ್ದಾರೆ. ಜಗದೀಶ್ ಶೆಟ್ಟರ್ 100ಕ್ಕೆ 100 ಗೆಲ್ತಾರೆ ಎಂದು ರಕ್ತದಲ್ಲಿ ಪತ್ರ ಬರೆಯುವ ಮೂಲಕ ಧಾರವಾಡ ಸೆಂಟ್ರಲ್ ನಲ್ಲಿ ಜಗದೀಶ್ ಶೆಟ್ಟರ್ ಗೆಲ್ಲೋದಿಲ್ಲ ಎಂದಿದ್ದ ಯಡಿಯೂರಪ್ಪ ಅವರಿಗೆ ತಿರುಗೇಟು ನೀಡಿದ್ದಾರೆ.

ಜಗದೀಶ್ ಶೆಟ್ಟರ್ ಅಭಿಮಾನಿ ಬರೆದಿರುವ ಈ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

No Comments

Leave A Comment