Log In
BREAKING NEWS >
ಜೂ.26ರ೦ದು ಉಡುಪಿ ಶ್ರೀಪುತ್ತಿಗೆ ಮಠದ ೪ನೇ ಪರ್ಯಾಯಕ್ಕೆ ಕಟ್ಟಿಗೆ ಮುಹೂರ್ತ ಕಾರ್ಯಕ್ರಮ ಜರಗಲಿದೆ.....

ಹುಬ್ಬಳ್ಳಿ: ರಕ್ತದಲ್ಲಿ ಪತ್ರ ಬರೆದಿದ್ದ ಅಭಿಮಾನಿ ನಿವಾಸಕ್ಕೆ ಜಗದೀಶ್ ಶೆಟ್ಟರ್ ಭೇಟಿ

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಸೆಂಟ್ರಲ್​ನಲ್ಲಿ ಜಗದೀಶ್ ಶೆಟ್ಟರ್ ಅವರು 100ಕ್ಕೆ 100 ಗೆಲ್ಲುತ್ತಾರೆ ಎಂದು ರಕ್ತದಲ್ಲಿ ಪತ್ರ ಬರೆದಿದ್ದ ಯುವಕ ಮಂಜುನಾಥ್ ಅವರ ನಿವಾಸಕ್ಕೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್​ ಭೇಟಿ ಅವರು ನೀಡಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ರಕ್ತದಲ್ಲಿ ಬರೆದು ಕೊಡುತ್ತೇನೆ ಶೆಟ್ಟರ್ ಗೆಲ್ಲುವುದಿಲ್ಲ ಎಂದು ಹೇಳಿಕೆ ನೀಡಿದ್ದರು. ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ಕಾರ್ಯಕರ್ತ ಮಂಜುನಾಥ್ ಅವರು, 100ಕ್ಕೆ 100 ಜಗದೀಶ್ ಶೆಟ್ಟರ್ ಗೆಲ್ಲುತ್ತಾರೆ ಎಂದು ರಕ್ತದಲ್ಲಿ ಪತ್ರ ಬರೆದು ತಿರುಗೇಟು ನೀಡಿದ್ದರು.

ಮಂಜುನಾಥ್ ಅವರ ಮನೆಗೆ ಭೇಟಿ ನೀಡಿದ ಜಗದೀಶ್ ಶೆಟ್ಟರ್​ ಅವರು, ತಮ್ಮ ಗೆಲುವಿಗಾಗಿ ರಕ್ತದಲ್ಲಿ ಶುಭ ಹಾರೈಸಿದ ಮಂಜುನಾಥನಿಗೆ ಸನ್ಮಾನಿಸಿ ಕೃತಜ್ಞತೆ ಸಲ್ಲಿಸಿದರು. ಮಂಜುನಾಥ್ ಸಹ ಚುನಾವಣೆಯಲ್ಲಿ ಗೆಲುವು ನಿಮ್ಮದಾಗಲಿ ಎಂದು ಜಗದೀಶ್​ ಶೆಟ್ಟರ್ ಅವರಿಗೆ ಶುಭ ಹಾರೈಸಿದರು.​

No Comments

Leave A Comment