Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಕಾರು ಹತ್ತುವ ವೇಳೆ ಕುಸಿದ ಸಿದ್ದರಾಮಯ್ಯ, ತಕ್ಷಣ ವೈದ್ಯರಿಂದ ಉಪಚಾರ

ವಿಜಯನಗರ: ಪ್ರತಿಪಕ್ಷ ನಾಯಕ ನಾಯಕ ಸಿದ್ದರಾಮಯ್ಯ ಅವರು ತಮ್ಮ ಕಾರು ಹತ್ತುವಾಗ ಬಾಗಿಲ ಬಳಿಯೇ ಕುಸಿದು ಬಿದ್ದಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಗಿಯಲ್ಲಿ ಶನಿವಾರ ನಡೆದಿದೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ್ಲಗಿ ಕಾಂಗ್ರೆಸ್ ಅಭ್ಯರ್ಥಿ ಡಾ. ಎನ್ ಟಿ ಶ್ರೀನಿವಾಸ್ ಅವರ ಪರ ಪ್ರಚಾರ ಮಾಡುವುದಕ್ಕಾಗಿ ಹೆಲಿಕಾಪ್ಟರ್​ ಮೂಲಕ ಕೂಡ್ಲಗಿಗೆ ಕೂಡ್ಲಿಗಿಗೆ ತೆರಳಿದ್ದರು.

ಹೆಲಿಕ್ಯಾಪ್ಟರನಿಂದ ಇಳಿದ ಕೂಡಲೇ ಮೊಬೈಲ್​ನಲ್ಲಿ ಬ್ಯೂಸಿ ಆದ ಕಾಂಗ್ರೆಸ್​ ನಾಯಕ ಸಿದ್ದರಾಮಯ್ಯ ಅವರು ಕಾರಿನ ಬಳಿ ಆಗಮಿಸಿದ್ದಾರೆ. ನಂತರ ಕಾರಿನೊಳಗೆ ಕೂಡಬೇಕೆನ್ನುವಷ್ಟರಲ್ಲಿ ಬಾಗಿಲ ಬಳಿಯೇ ಕುಸಿದು ಬಿದ್ದಿದ್ದಾರೆ. ತಕ್ಷಣವೆ ಸ್ಥಳದಲ್ಲಿದ್ದ ಅವರ ಅಂಗರಕ್ಷಕ ನೆರವಿಗೆ ಧಾವಿಸಿ ಕೈ ಹಿಡಿದು ಎತ್ತಿದ್ದಾರೆ.

ನಂತರ ಕಾರಿನ ಸೀಟಿನ ಮೇಲೆ ಕೂಡಿಸಿ ವೈದ್ಯರು ಗುಕ್ಲೋಸ್ ನೀಡಿದ್ದಾರೆ. ಗುಕ್ಲೋಸ್ ಕುಡಿದ ಬಳಿಕ ಚೇತರಿಸಿಕೊಂಡು ಮತ್ತೆ ಸಿದ್ದರಾಮಯ್ಯ ಜನರತ್ತ ಕೈ ಬೀಸಿದ್ದಾರೆ. ಚುನಾವಣಾ ಪ್ರಚಾರದಲ್ಲಿ ಬಿಡುವಿಲ್ಲದೆ ಓಡಾಡುತ್ತಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸ್ವಲ್ಪ ಸುಸ್ತು ಆದಂತೆ ಕಂಡುಬಂದರು.

ಗಾಬರಿ ಪಡುವಂತಹದ್ದೇನಿಲ್ಲ, ಗಟ್ಟಿಮುಟ್ಟಾಗಿದ್ದೇನೆ.

ನಿತ್ಯ ಅಡ್ಡಾಡುವ ಕಾರು ಬದಲಾಗಿರುವ ಕಾರಣ ಸೈಡ್ ಸ್ಟೆಪ್ ಇಲ್ಲದ ಕಾರಿನಲ್ಲಿ ಕಾಲು ಜಾರಿ ಹಿಂದಕ್ಕೆ ಮುಗ್ಗರಿಸಿದ್ದೆ.

ಈಗ ಆರಾಮಾಗಿದ್ದೇನೆ.
ಇದನ್ನು ಅತಿರಂಜಿತ ರೀತಿಯಲ್ಲಿ ವರದಿ‌ಮಾಡಿ ಜನ ಗಾಬರಿ ಪಡುವಂತೆ ಮಾಡಬೇಡಿ ಎಂದು ಮಾಧ್ಯಮ ಮಿತ್ರರಲ್ಲಿ ವಿನಂತಿ.
ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ

No Comments

Leave A Comment